ಹೊಸನಗರ ಕ್ಷೇತ್ರ ಮರುಸ್ಥಾಪನೆ ಪಾದಯಾತ್ರೆಯಿಂದ ಫಲವಿಲ್ಲ, ಅದೇ 110 ಕೆ.ವಿ ವಿದ್ಯುತ್ ಲೈನ್ ತರಲು ಹೋರಾಟ ನಡೆಸಿ ; ಜನಹಿತರಂಗದ ಸಂಚಾಲಕ ವಾಟಗೋಡು ಸುರೇಶ್

Written by Mahesha Hindlemane

Published on:

ಹೊಸನಗರ ; ಹೊಸನಗರ ಕ್ಷೇತ್ರ ಮರುಸ್ಥಾಪನೆಗೆ ಆಗ್ರಹಿಸಿ ಏ.5 ಮತ್ತು 6 ರಂದು ಕೈಗೊಂಡಿರುವ ಪಾದಯಾತ್ರೆಯಿಂದ ಯಾವುದೇ ಪ್ರತಿಫಲ ನಿರೀಕ್ಷೆ ಸಾಧ್ಯವಿಲ್ಲ. ಹೊಸನಗರ ಪಟ್ಟಣದ ತಾಲ್ಲೂಕಿನ ಬಹುದೊಡ್ಡ ಸಮಸ್ಯೆಯಾದ ವಿದ್ಯುತ್ ಸಮಸ್ಯೆಯನ್ನು ಬಗೆಹರಿಸಲು 110.ಕೆ.ವಿ ತರಲು ಹೋರಾಟ ನಡೆಸಿ ಎಂದು ಜನಹಿತ ಹೋರಾಟ ಎಂದು ಜನಹಿತ ರಂಗದ ರಾಜ್ಯ ಸಂಚಾಲಕ ವಾಟಗೋಡು ಸುರೇಶ್ ಹೇಳಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಅವರು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಪ್ರಸ್ತುತ ವಿಧಾನಸಭಾ ಕ್ಷೇತ್ರ ಪುನರ್‌ವಿಂಗಡಣೆ ಮಾಡುವ ಪ್ರಸ್ತಾವನೆಯೇ ಇಲ್ಲ. ಕೇಂದ್ರದಿಂದ ಅಧಿಸೂಚನೆಯೇ ಆಗದಿರುವಾಗ ಪಾದಯಾತ್ರೆ, ಹೋರಾಟ ಮಾಡಿ ಉಪಯೋಗವಿಲ್ಲ. ಜನರ ಹಕ್ಕೊತ್ತಾಯದ ಮನವಿಯನ್ನು ಯಾರಿಗೆ ಸಲ್ಲಿಸುವುದು ಎನ್ನುವ ಪ್ರಶ್ನೆಗೆ ಮೊದಲು ಉತ್ತರ ಬೇಕಿದೆ ಎಂದರು.

2004ರಿಂದ 2008ರ ವರೆಗೆ ಸಾಕಷ್ಟು ಹೋರಾಟ ನಡೆಸಿ, ಅಂದಿನ ಆಯೋಗದ ಮುಂದೆ ವಾದ ಮಂಡಿಸಿದರೂ ಪ್ರಯೋಜನವಾಗಿಲ್ಲ. ಅಂದು ಮುಂದಾಳತ್ವ ವಹಿಸಿದ್ದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಮುಖಂಡರು ಕ್ಷೇತ್ರ ಉಳಿಸಿಕೊಳ್ಳುವ ಪ್ರಯತ್ನ ಮಾಡಲಿಲ್ಲ ಎಂದು ಆಪಾದಿಸಿದರು.

ಸದ್ಯ ಎರಡು ರಾಷ್ಟ್ರೀಯ ಪಕ್ಷಗಳೂ ರಾಜ್ಯ ಮತ್ತು ಕೇಂದ್ರದಲ್ಲಿ ಅಧಿಕಾರದಲ್ಲಿವೆ. ಹಾಗೂ ಪರಸ್ಪರ ವಿರೋಧ ಪಕ್ಷಗಳಾಗಿವೆ. ಸರಕಾರದ ಹಂತದಲ್ಲಿ ಆಗಬೇಕಿರುವ ಕ್ಷೇತ್ರ ಮರುವಿಂಗಡಣೆಗೆ ಸರಕಾರದ ಮಟ್ಟದಲ್ಲಿ ಒತ್ತಡ ಹೇರಬೇಕಾಗಿರುವ ರಾಜಕೀಯ ಮುಖಂಡರು ಅದನ್ನು ಬಿಟ್ಟು ಇಲ್ಲಿ ಜನಸಾಮಾನ್ಯರ ದಿಕ್ಕುತಪ್ಪಿಸಿ ಪಾದಯಾತ್ರೆ ಮಾಡುತ್ತಿರುವುದರ ಔಚಿತ್ಯವೇನು ಎಂದು ಪ್ರಶ್ನಿಸಿದರು.

ಹೊಸನಗರ ಕ್ಷೇತ್ರ ಇಲ್ಲದ ಕಾರಣಕ್ಕೆ ಅಭಿವೃದ್ಧಿಯಾಗಿಲ್ಲ ಎನ್ನುವ ಆರೋಪ ಕೇಳಿಬರುತ್ತಿದೆ. ಅದು ನಿಜವಾಗಿದ್ದಲ್ಲಿ, ಇದು ಇಬ್ಬರೂ ಶಾಸಕರ ವೈಫಲ್ಯ ಎನ್ನಬಹುದು. ಎರಡೂ ಪಕ್ಷದ ನಾಯಕರೂ ಇದಕ್ಕೆ ಹೊಣೆ ಹೊತ್ತು, ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದು ಸೂಕ್ತ. ನೈಜ ಕಾಳಜಿಯಿಂದ ಹೋರಾಟ ನಡೆಸುವುದಾದರೆ, ಹೋರಾಟದ ಮುಂದಾಳತ್ವ ವಹಿಸಿರುವ ಮುಖಂಡರು ತಮ್ಮ ಪಕ್ಷಗಳ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿ ಹೋರಾಟ ನಡೆಸಲಿ ಎಂದು ಅವರು ಸವಾಲು ಹಾಕಿದರು.

ಪಶ್ಚಿಮಘಟ್ಟ ಪ್ರದೇಶಕ್ಕೆ ವಿಶೇಷ ಮಾನ್ಯತೆ ಬೇಕು:

ದೇಶದಲ್ಲಿ ಪಶ್ಚಿಮಘಟ್ಟ ಸಾಲಿನಲ್ಲಿರುವ ರಾಜ್ಯಗಳಿಗೆ ಪ್ರತ್ಯೇಕ ಪ್ರಾಧಾನ್ಯತೆ ನೀಡಬೇಕು. ಕ್ಷೇತ್ರ ಮರುವಿಂಗಡಣೆ ಸಂದರ್ಭದಲ್ಲಿ ಇಲ್ಲಿನ ಭೌಗೋಳಿಕ ಪರಿಸ್ಥಿತಿಗೆ ತಕ್ಕಂತೆ ಹೆಚ್ಚಿನ ಮಾನ್ಯತೆ ನೀಡಬೇಕು. ಶಿವಮೊಗ್ಗ ಜಿಲ್ಲೆಯನ್ನೇ ಒಂದು ರಾಜ್ಯವನ್ನಾಗಿಸಿ, ಇಲ್ಲಿನ ತಾಲೂಕುಗಳನ್ನೇ ಪ್ರತ್ಯೇಕ ಕ್ಷೇತ್ರ ಮಾಡಿದಲ್ಲಿ ಅಭಿವೃದ್ಧಿಗೆ ಅನುಕೂಲಕರ ವಾತಾವರಣ ನಿರ್ಮಾಣ ಆಗಲಿದೆ. ಹೋರಾಟದ ಮುಂಚೂಣಿಯಲ್ಲಿರುವವರು ಇದನ್ನೂ ಗಮನಿಸಬೇಕು ಎಂದು ಅವರು ಒತ್ತಾಯಿಸಿದರು.

ವಿದ್ಯುತ್ ಸಮಸ್ಯೆ ಬಗೆ ಹರಿಸಲಿ ;

ಹೊಸನಗರ ತಾಲ್ಲೂಕಿನಲ್ಲಿ ಹತ್ತರೂ ವರ್ಷಗಳಿಂದ ವಿದ್ಯುತ್ ಸಮಸ್ಯೆಯಿದೆ ರೈತರ ತೋಟಗಳಿಗೆ ನೀರಿಲ್ಲ. ಶಾಲೆ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ತಾಲ್ಲೂಕಿನಲ್ಲಿ ರಾತ್ರಿಯಾದರೇ ವಿದ್ಯುತ್ ಇರುವುದಿಲ್ಲ ಒಂದು ಮಳೆ ಒಂದು ಗುಡುಗು ಬಂದರೇ ಹಗಲಿರುಳು ಕರೆಂಟ್ ಇರುವುದಿಲ್ಲ. ಹೋರಾಟ ಮಾಡಲೇಬೇಕು. ಜನರ ಮನಸ್ಸಿನಲ್ಲಿ ಉಳಿಯಬೇಕು ಎಂದು ತಿಳಿದುಕೊಂಡ ರಾಜಕೀಯ ಧುರೀಣರು ಹಾಗೂ ಸ್ವಾಮೀಜಿಯವರು ಹೊಸನಗರ ತಾಲ್ಲೂಕಿಗೆ 110 ಕೆ.ವಿ ಘಟಕಕ್ಕಾಗಿ ಹೋರಾಟ ನಡೆಸಲಿ ಅದು ಬಿಟ್ಟು ಪ್ರಯೋಜನಕ್ಕೆ ಬಾರದೇ ಇರುವ ಹೋರಾಟ ಮಾಡುವುದು ವ್ಯರ್ಥ ಮತ್ತು ಮುಗ್ಧ ಜನರ ಕಣ್ಣೊರೆಸುವ ತಂತ್ರ ಬೇಡ ಎಂದರು.

Leave a Comment