Chikmagaluru News

ಮುಳ್ಳು ಚುಚ್ಚಿದೆ ಎಂದು ಮಲಗಿದ್ದ ವ್ಯಕ್ತಿ ಪ್ರಾಣಪಕ್ಷಿ ಬೆಳಗಾಗುವಷ್ಟರಲ್ಲಿ ಹಾರಿಹೋಗಿತ್ತು ! ಅಸಲಿಗೆ ಆಗಿದ್ದೇನು ?

ತರೀಕೆರೆ : ಮುಳ್ಳು ಚುಚ್ಚಿದೆ ಎಂದು ತಿಳಿದು ಮಲಗಿದ ವ್ಯಕ್ತಿಯ ಪ್ರಾಣಪಕ್ಷಿ ಬೆಳಗಾಗುವುದರೊಳಗೆ ಹಾರಿಹೋದ ಘಟನೆ ತರಿಕೇರೆ (Tharikere) ತಾಲೂಕಿನ ಕರಕುಚ್ಚಿ ಗ್ರಾಮದಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಗಂಗಪ್ಪ (48) ಮೃತ ದುರ್ದೈವಿ. ಗದ್ದೆ ಕೆಲಸಕ್ಕೆ ಹೋದಾಗ ಗಂಗಪ್ಪನವರಿಗೆ ಹಾವು (Snake) ಕಚ್ಚಿದೆ. ಆದರೆ ಮುಳ್ಳು ಚುಚ್ಚಿದೆ ಎಂದು ತಿಳಿದು ಅವರು ಮನೆಗೆ ಬಂದು ಊಟ ಮಾಡಿ ಮಲಗಿದ್ದಾರೆ.

Tharikere

ಹಾವು ಕಡಿದಿದ್ದು ಗೊತ್ತೇ ಇಲ್ಲ !

ಗಂಗಪ್ಪನಿಗೆ ಹಾವು ಕಡಿದಿರೋದು ಗೊತ್ತೇ ಇರಲಿಲ್ಲ. ಸಂಜೆ ಸರಿ ಸುಮಾರು 5ರಿಂದ 6 ಗಂಟೆ ಸಮಯಕ್ಕೆ ಹಾವು ಕಚ್ಚಿದ ಬಳಿಕ ಮನೆಗೆ ಬಂದು ಊಟ ಮಾಡಿ, ಮಲಗಿ ಬೆಳಗಿನಜಾವ 3 ಗಂಟೆಗೆ ನಿಧಾನಕ್ಕೆ ಹಾವಿನ ವಿಷ ದೇಹಕ್ಕೆ ಹರಡಿದ ಮೇಲೆ ಸುಸ್ತು-ವಾಂತಿ ಎಂದು ಕೂಗಾಡಿದ ಮೇಲೆ ಮನೆಯವರು ನೀರು ಕುಡಿಸಿದ ಮೇಲೆ ಬಾಯಿಯಲ್ಲಿ ನೊರೆ ಬಂದು ಸಾವನ್ನಪ್ಪಿದ್ದಾರೆ.

ಒಂದು ಸಣ್ಣ ನಿರ್ಲಕ್ಷ್ಯದಿಂದ ವ್ಯಕ್ತಿಯ ಪ್ರಾಣವೇ ಹೋಗಿದ್ದು, ಈ ಘಟನೆ ಸಂಬಂಧ ಲಕ್ಕವಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

Adike Price 27 ಮೇ 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ರೇಟ್ ಎಷ್ಟಿದೆ ?

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>