ಹೊಸನಗರ ; ತಾಲ್ಲೂಕಿನ ಮಾಸ್ತಿಕಟ್ಟೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಾಣಿ ಡ್ಯಾಮ್ ಬಳಿ ಕಾಂತಾರ-1 ಸಿನಿಮಾದ ಚಿತ್ರೀಕರಣ ಸಂದರ್ಭದಲ್ಲಿ ದೋಣಿ ಮಗುಚಿದೆ ಎಂದು ಹಬ್ಬಿರುವ ಸುದ್ದಿ ಸುಳ್ಳು ಎಂದು ಹೊಸನಗರ ಸರ್ಕಲ್ ಇನ್ಸ್ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್ ಸ್ಪಷ್ಟಪಡಿಸಿದ್ದಾರೆ.

ಅವರು ಭಾನುವಾರ ಬೆಳಗ್ಗೆ ಮಾಸ್ತಿಕಟ್ಟೆ ಬಳಿ ಕಾಂತಾರ ಸಿನಿಮಾದ ಶೂಟಿಂಗ್ ನಡೆಯುತ್ತಿದ್ದು ಅಲ್ಲಿಗೆ ಭೇಟಿ ನೀಡಿ ಸ್ಥಳ ಪರಿಶೀಲಿಸಿ ಮಾತನಾಡಿದರು.

ಶನಿವಾರ ಸಂಜೆಯಿಂದ ಕೆಲವು ಮಾಧ್ಯಮಗಳಲ್ಲಿ ದೋಣಿ ಮಗುಚಿ 30 ಜನರು ನೀರಿನಲ್ಲಿ ಮುಳುಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹಾಗೂ ಸಿನಿಮಾದ ಕ್ಯಾಮೆರಾಗಳು ನೀರಿನಲ್ಲಿ ಮುಳುಗಿದೆ ಎಂಬ ಸುದ್ದಿ ಸುಳ್ಳಾಗಿದ್ದು ಶನಿವಾರ ಸಂಜೆ ಹೊಳೆಯ ಬದಿ ಹಾಕಿರುವ ತೇಲುವ ಅಟ್ಟಣಿಗೆ ಮಗುಚಿದೆ. ಯಾವುದೇ ಜೀವ ಹಾನಿ ಸಂಭವಿಸಿಲ್ಲ. ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.