ಹೊಸನಗರ

ಗೌತಮ ಬುದ್ಧನ ತತ್ವಾದರ್ಶಗಳು ಸರ್ವಕಾಲಿಕ ಸತ್ಯ ; ಡಾ. ಶಾಂತರಾಮ ಪ್ರಭು

ಹೊಸನಗರ ; ಆಯಾ ಕಾಲಕ್ಕೆ ಅನುಗುಣವಾಗಿ ಮಹಾತ್ಮರ ಜನನ ಆಗುತ್ತದೆ. ಸಮಾಜ ಪರಿವರ್ತನೆಗೆ ಗೌತಮ ಬುದ್ದ ನೀಡಿದ ಕೊಡುಗೆ ಅಪಾರವಾಗಿದ್ದು, ಆತನ ತತ್ವಾದರ್ಶಗಳು ಸರ್ವಕಾಲಿಕ ಸತ್ಯವೇ ಆಗಿದೆ‌ ಎಂದು ವಿಶ್ರಾಂತ ಪ್ರಾಚಾರ್ಯ, ಸಾಹಿತಿ ಡಾ. ಶಾಂತರಾಮ ಪ್ರಭು ತಿಳಿಸಿದರು.

WhatsApp Group Join Now
Telegram Group Join Now
Instagram Group Join Now

ಪಟ್ಟಣಕ್ಕೆ ಸಮೀಪದ ವರಕೋಡು ಗ್ರಾಮದ ಕೃಷಿಕ ಡಾ. ಅಶೋಕ ಅವರ ಫಾರಂ ಹೌಸ್ ಆವರಣದಲ್ಲಿ ಬುದ್ದ ಪೌರ್ಣಿಮೆ ಅಂಗವಾಗಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿದ್ದ ಸಾಹಿತ್ಯ ಹುಣ್ಣುಮೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ತಾಲೂಕು ಕಸಾಪ ಅಧ್ಯಕ್ಷರಾದ ಗಣೇಶ್ ಮೂರ್ತಿ ಪ್ರಾಸ್ತಾವಿಕ ಮಾತನಾಡಿ, ಕಳೆದ ಐದು ತಿಂಗಳ ತಮ್ಮ ಅಧ್ಯಕ್ಷೀಯ ಅವಧಿಯಲ್ಲಿ ನಿರಂತರ 25 ಸಾಹಿತ್ಯ ಪೂರಕ ಕಾರ್ಯಕ್ರಮ ಆಯೋಜನೆಗೆ ಸಾಹಿತ್ಯ ಪ್ರೇಮಿಗಳ ಸಹಕಾರವೇ ಕಾರಣವೆಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕಸಾಪ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ಮಾತನಾಡಿ, ಕಳೆದ 20 ವರ್ಷಗಳಿಂದ ಸಾಹಿತ್ಯ ಹುಣ್ಣಿಮೆ ಕಾರ್ಯಕ್ರಮ ಅದ್ದೂರಿಯಾಗಿ ನಡೆದು ಬರಲು ಜಿಲ್ಲೆಯ ಸಾಹಿತ್ಯಾಸಕ್ತರ ಪ್ರೇರಣೆ ಕಾರಣವೆಂದರು.

ಇದೇ ವೇಳೆ ಗಮಕಿ ಅನುಪಮ ಸುರೇಶ್ ಹಾಗೂ ಡಾ. ಅಶೋಕ ಬುದ್ದನ ಜೀವನ-ಸಾಧನೆ ಕುರಿತು ಗಮಕ ವಾಚಿಸಿದರು. ಕೆಸುವಿನ ಮನೆ ರತ್ನಾಕರ್, ಇಲಿಯಾಸ್, ನವೀನ್ ಕುಮಾರ್ ಶಿವಮೊಗ್ಗ ಕವನ ವಾಚಿಸಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ವಸಿಷ್ಠ ಮತ್ತು ಬಾಲಕ ಚೈತನ್ಯ ಕಥೆ ಹೇಳಿದರೆ,
ಕೋರ್ಟ್ ಕಟಕಟೆಯಲ್ಲಿನ ಹಾಸ್ಯ ಪ್ರಸಂಗದ
ನಿಜ ಸಂಗತಿಗಳನ್ನು ವಕೀಲ ಕೆ.ಬಿ ಪ್ರಶಾಂತ್ ತಮ್ಮ ಅನುಭವ ಮೂಲಕ ತಿಳಿಸಿ ಸಭಿಕರನ್ನು ನಗೆಗಡಲಲ್ಲಿ ತೇಲಿಸಿದರು.

ನಿವೃತ್ತ ಶಿಕ್ಷಕ ಕುಬೇಂದ್ರಪ್ಪ ಪ್ರಾರ್ಥಿಸಿದರು.
ಸಾಹಿತಿ ಪ್ರವೀಣ್ ಎಂ ಕಾರ್ಗಡಿ ಸ್ವಾಗತಿಸಿದರು. ಅಶ್ವಿನಿ ಪಂಡಿತ್ ನಿರೂಪಿಸಿದರು. ಶಿಕ್ಷಕ ಶಿವಪ್ಪ ವಂದಿಸಿದರು. ಕಸಾಪ ತಾಲೂಕು ಕಾರ್ಯದರ್ಶಿ ಕೆ.ಜಿ. ನಾಗೇಶ್ ಕಾರ್ಯಕ್ರಮ ನಿರ್ವಹಿಸಿದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]