Ripponpete

ಭಾರತೀಯ ಸಂಸ್ಕೃತಿಯಲ್ಲಿ ಗುರು ಎಂಬ ಎರಡಕ್ಷರಕ್ಕೆ ಅತ್ಯುನ್ನತ ಸ್ಥಾನವಿದೆ

ರಿಪ್ಪನ್‌ಪೇಟೆ : ಭಾರತೀಯ ಸಂಸ್ಕೃತಿಯಲ್ಲಿ ಗುರು ಎಂಬ ಎರಡಕ್ಷರಕ್ಕೆ ಅತ್ಯುನ್ನತ ಸ್ಥಾನವಿದೆ. ಪ್ರತಿಯೊಂದು ಸಾಧನೆಯ ಹಿಂದೆ ಒಬ್ಬ ಗುರು ಇರುತ್ತಾನೆ. ಅಮ್ಮ-ಅಪ್ಪ ಎಂಬ ಪದಕ್ಕಿರುವಷ್ಟು ಶ್ರೇಷ್ಟ ಸ್ಥಾನದಲ್ಲಿ ನಿಲ್ಲುವ ಗುರುಗಳು ಎಂದು ನಿವೃತ್ತ ಉಪನ್ಯಾಸಕ ಶ್ರೀಧರಮೂರ್ತಿ ಹೇಳಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಸಮೀಪದ ಸಮಟಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಬಿಜೆಪಿ ಹೊಸನಗರ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಏರ್ಪಡಿಸಲಾಗಿದ್ದ “ಗುರು ಪೂರ್ಣಿಮಾ’’ ಕಾರ್ಯಕ್ರಮದಲ್ಲಿ ಗುರುಪೂಜೆ ಸ್ವೀಕರಿಸಿ ಮಾತನಾಡಿ, ಶ್ರದ್ದಾಭಕ್ತಿಯಿಂದ ಈ ಗುರು ಪೂರ್ಣಿಮೆಯನ್ನು ನೆರವೇರಿಸುತ್ತಿರುವುದು ಮುಂದಿನ ಯುವ ಪೀಳಿಗಗೆ ಭಕ್ತಿ ಭಾವನೆ ಬೆಳಸಲು ಉತ್ತಮ ವೇದಿಕೆಯಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಸಮಟಗಾರು ಶಾಲೆಯ ಮುಖ್ಯ ಶಿಕ್ಷಕಿ ರಾಜ್ಯ ಪ್ರಶಸ್ತಿ ಪುರಸ್ಕೃತೆ ರತ್ನಕುಮಾರಿ ಮತ್ತು ತಾಲ್ಲೂಕು, ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ ಪಡೆದಿರುವ ಅಂಬಿಕಾ, ಸಹ ಶಿಕ್ಷಕರಾದ ದಿನೇಶ್, ಶಶಿಕಲಾ, ಶೋಭಾ, ಹಾಗೂ ರಿಪ್ಪನ್‌ಪೇಟೆಯ ನಿವೃತ್ತ ಪ್ರಾಂಶುಪಾಲ ಎಂ.ಎಸ್.ಕೃಷ್ಣಮೂರ್ತಿ ಗುರುಗಳಿಗೆ ಪಾದ ಪೂಜೆಯೊಂದಿಗೆ ಗೌರವ ಸಮರ್ಪಿಸಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ಮೋರ್ಚಾದ ಮಂಡಲ ಅಧ್ಯಕ್ಷೆ ಆಶಾ ರವೀಂದ್ರ ವಹಿಸಿದ್ದರು.

ಜಿಲ್ಲಾ ಮಹಿಳಾ ಮೋರ್ಚಾ ಖಜಾಂಚಿ ಪದ್ಮಸುರೇಶ್, ಕಾರ್ಯದರ್ಶಿ ಲೀಲಾ ಉಮಾಶಂಕರ್, ಗ್ರಾಮ ಪಮಚಾಯ್ತಿ ಮಾಜಿ ಅಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್, ಜಿಲ್ಲಾ ಓಬಿಸಿ ಮೋರ್ಚಾ ಸದಸ್ಯೆ ರೇಖಾ ರವಿ, ತಾಲ್ಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷೆ ನಾಗರತ್ನ ದೇವರಾಜ್, ಮಹಿಳಾ ಮೋರ್ಚಾ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಲಕ್ಷ್ಮಿ ಶ್ರೀನಿವಾಸ್, ಮೀನಾಕ್ಷಿ, ಮಂಗಳ, ಸುಮಿತ್ರ, ಗುಲಾಬಿ, ಇನ್ನಿತರ ಪಕ್ಷದ ಪ್ರಮುಖರು ಪಾಲ್ಗೊಂಡಿದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>