ತೀರ್ಥಹಳ್ಳಿ : ಅರಳಸುರಳಿ ಸಮೀಪದ ಹುಲಿಸರದಲ್ಲಿ ಇರುವ ಶ್ರೀವನ ದುರ್ಗಾಪರಮೇಶ್ವರಿ ದೇವಸ್ಥಾನದ ಗರ್ಭಗುಡಿಯ ಬೀಗ ಒಡೆದು ಬಾಗಿಲು ತೆರೆಯುವ ಮೂಲಕ ದೇವಿಯ ಬೆಳ್ಳಿಯ ಮುಖವಾಡ, ಮಾಂಗಲ್ಯ ಸರ, ಮತ್ತು ಇನ್ನಿತರ ಬೆಳ್ಳಿ ಪೂಜಾ ವಸ್ತುಗಳೊಂದಿಗೆ ಸುಮಾರು 2 ಕಿಲೋಗ್ರಾಂ ಬೆಳ್ಳಿಯ ವಸ್ತುಗಳು, ಕಾಣಿಕೆಯನ್ನು ಕಳ್ಳರು ದೋಚಿರುವ ಘಟನೆ ನಡೆದಿದೆ.
ಅರಳಸುರುಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಈ ದೇವಸ್ಥಾನದಲ್ಲಿ ವಾರದಲ್ಲಿ ಮಂಗಳವಾರ ಮತ್ತು ಶುಕ್ರವಾರ ಎರಡು ದಿನ ಪೂಜೆ ನಡೆಯುತ್ತಿದ್ದು, ಇದನ್ನು ಗಮನಿಸಿ ಈ ಕೃತ್ಯ ನಡೆಸಿರುವ ಶಂಕೆ ವ್ಯಕ್ತವಾಗಿದೆ.
ಭಕ್ತರೊಬ್ಬರು ಇಂದು ಬೆಳಿಗ್ಗೆ ದೇವರ ದರ್ಶನಕ್ಕೆ ಬಂದಾಗ ಕಳ್ಳತನ ನಡೆರುವ ಬಗ್ಗೆ ಕಂಡು ಬಂದಿದ್ದು ತಕ್ಷಣವೇ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Malnad Times App ಡೌನ್ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
ತೀರ್ಥಹಳ್ಳಿ ಪೊಲೀಸ್ ಠಾಣೆಯ ಇನ್ಸಪೆಕ್ಟರ್ ಇಮ್ರಾನ್ ಬೇಗ್, ಸಬ್ ಇನ್ಸ್ಪೆಕ್ಟರ್ ಸುಷ್ಮಾ ಮತ್ತು ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಪ್ರಾರಂಭವಾಗಿದೆ.

