ರಿಪ್ಪನ್ಪೇಟೆ : 110/11 ಕೆವಿ ಮಾರ್ಗದ ತುರ್ತು ನಿರ್ವಹಣಾ ಕಾಮಗಾರಿಯ ನಿಮಿತ್ತ ರಿಪ್ಪನ್ಪೇಟೆ ಸೇರಿದಂತೆ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ಇಂದು (ಫೆ.01) ಬೆಳಗ್ಗೆ 10-00 ರಿಂದ ಸಂಜೆ 06-00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಇಲಾಖೆ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ !
ರಿಪ್ಪನ್ಪೇಟೆ, ಬೆಳ್ಳೂರು, ಹೆದ್ದಾರಿಪುರ, ಅಮೃತ (ಗರ್ತಿಕೆರೆ) ಗ್ರಾ.ಪಂ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ತಿಳಿಸಲಾಗಿದೆ.

