ಹೊಸನಗರ ; ಮಾ. 13ರ ಬೆಳಗ್ಗೆ 09:00 ಗಂಟೆಯಿಂದ ಸಂಜೆ 06:00 ಗಂಟೆವರೆಗೆ 110/11 ಕೆ.ವಿ ಹುಲಿಕಲ್ ಉಪವಿದ್ಯುತ್ ವಿತರಣಾ ಕೇಂದ್ರ ಇದರ ತ್ರೈ ಮಾಸಿಕ ನಿರ್ವಹಣಾ ಕಾರ್ಯದ ಪ್ರಯುಕ್ತ ಅಂಗಡದೋದೂರು, ಮೂಡಗೊಪ್ಪ (ನಗರ), ಯಡೂರು, ಸುಳಗೋಡು, ಕರಿಮನೆ, ಖೈರಗುಂದ, ಅರಮನಕೊಪ್ಪ ಮತ್ತು ನಾಗೋಡಿ (ನಿಟ್ಟೂರು) ಗ್ರಾಮ ಪಂಚಾಯಿತಿ ಪ್ರದೇಶಗಳಿಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಆದ್ದರಿಂದ ಈ ಭಾಗದ ಗ್ರಾಹಕರು ಸಹಕರಿಸುವಂತೆ ಹೊಸನಗರ ಮೆಸ್ಕಾಂ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಚಂದ್ರಶೇಖರ್ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.