ಮೇ 06 ರಂದು ಹೊಸನಗರ ಟೌನ್ ಸೇರಿದಂತೆ ಈ ಗ್ರಾ.ಪಂ. ವ್ಯಾಪ್ತಿಯಲ್ಲಿ ಕರೆಂಟ್ ಇರಲ್ಲ !

Written by Mahesha Hindlemane

Published on:

ಹೊಸನಗರ ; ಇಲ್ಲಿನ ಉಪವಿಭಾಗದಲ್ಲಿ ಮೇ 06 ರಂದು ಬೆಳಿಗ್ಗೆ 10-00 ರಿಂದ ಸಂಜೆ 5-00 ಗಂಟೆವರೆಗೆ ಸಾಗರ 110/33/11 ಕೆ.ವಿ ಉಪವಿದ್ಯುತ್ ವಿತರಣಾ ಕೇಂದ್ರದ ನಿರ್ವಹಣಾ ಕಾರ್ಯ ಇರುವುದರಿಂದ ಮತ್ತು ಇದೇ ದಿನ 33 ಕೆ.ವಿ ಸಾಗರ – ಹೊಸನಗರ ಮಾರ್ಗ ನಿರ್ವಹಣೆ ಹಾಗೂ ಉಪವಿದ್ಯುತ್ ವಿತರಣಾ ಕೇಂದ್ರ ನಿರ್ವಹಣೆ ಪ್ರಯುಕ್ತ ಸಾಗರದಿಂದ ಹೊಸನಗರಕ್ಕೆ ಬಂದಿರುವ ಸಾಗರ-ಹೊಸನಗರ ವಿದ್ಯುತ್ ಮಾರ್ಗದ ಜೇನಿ, ಮಾರುತಿಪುರ, ರಾಮಚಂದ್ರಾಪುರ, ಮೇಲಿನಬೆಸಿಗೆ, ಸೊನಲೆ ಗ್ರಾಮ ಪಂಚಾಯಿತಿ ಮತ್ತು ಹೊಸನಗರ ಟೌನ್ ವ್ಯಾಪ್ತಿಯ ಪ್ರದೇಶಗಳಿಗೆ ವಿದ್ಯುತ್ ಸರಬರಾಜು ಇರುವುದಿಲ್ಲ.

WhatsApp Group Join Now
Telegram Group Join Now
Instagram Group Join Now

ಆದ್ದರಿಂದ ಹೊಸನಗರ ಉಪವಿಭಾಗದ ಗ್ರಾಹಕರು ಸಹಕರಿಸುವಂತೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪತ್ರಿಕಾ ಪ್ರಕಟಣೆ ಮೂಲಕ ಕೋರಿದ್ದಾರೆ‌.

Leave a Comment