ಹೊಸನಗರ : ಇಲ್ಲಿನ ಉಪವಿಭಾಗದಲ್ಲಿ ನಾಳೆ (ಏ.12) ಬೆಳಿಗ್ಗೆ 10-00 ರಿಂದ ಸಂಜೆ 6-00 ಗಂಟೆವರೆಗೆ 33 ಕೆ.ವಿ ಸಾಗರ-ಹೊಸನಗರ ಮಾರ್ಗ ನಿರ್ವಹಣೆ ಮತ್ತು ರೀಕಂಡಕ್ಟರಿಂಗ್ ಕಾಮಗಾರಿ ಪ್ರಯುಕ್ತ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ !
ಸಾಗರದಿಂದ ಹೊಸನಗರಕ್ಕೆ ಬಂದಿರುವ ಸಾಗರ-ಹೊಸನಗರ ವಿದ್ಯುತ್ ಮಾರ್ಗದ ಜೇನಿ, ಮಾರುತಿಪುರ, ರಾಮಚಂದ್ರಾಪುರಮಠ, ಮೇಲಿನಬೆಸಿಗೆ, ಸೊನಲೆ, ಎಂ.ಗುಡ್ಡೆಕೊಪ್ಪ, ಕರಿನಗೊಳ್ಳಿ ಮತ್ತು ಕೋಡೂರು ಗ್ರಾಮ ಪಂಚಾಯಿತಿ ಮತ್ತು ಹೊಸನಗರ ಟೌನ್ ವ್ಯಾಪ್ತಿಯ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಆದ್ದರಿಂದ ಹೊಸನಗರ ಉಪವಿಭಾಗದ ಗ್ರಾಹಕರು ಸಹಕರಿಸಬೇಕೇಂದು ಸಹಾಯಕ ಕಾರ್ಯನಿರ್ವಹಕ ಇಂಜಿನೀಯರ್ ಚಂದ್ರಶೇಖರ್ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

