ಹೊಸನಗರ ; ತಾಲ್ಲೂಕಿನ ರೈತರು ಬೆಳೆ ಸಮೀಕ್ಷೆ ಮಾಡದಿದ್ದರೆ ಬೆಳೆ ವಿಮೆ ಮತ್ತು ಸರ್ಕಾರದ ಸಬ್ಸಿಡಿ ಸೌಲಭ್ಯಗಳು ಸಿಗುವುದಿಲ್ಲ ಎಂದು ಹೊಸನಗರ ಕೃಷಿ ಇಲಾಖೆಯ ಸಹಾಯಕ ನಿರ್ದೆಶಕ ಸಚಿನ್ ಹೆಗಡೆ ರೈತರಿಗೆ ಮಾಹಿತಿ ನೀಡಿದ್ದಾರೆ.
ಅವರು ಕೃಷಿ ಇಲಾಖೆಯ ಆವರಣದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿ, ಸರ್ಕಾರದ ಬೆಳೆ ವಿಮೆ, ಬೆಂಬಲ ಬೆಲೆ, ಬೆಳೆ ಹಾನಿ ಪರಿಹಾರ, ಕೃಷಿ ಸಬ್ಸಿಡಿ ಯೋಜನೆಗಳನ್ನು ಪಡೆಯಲು ಪ್ರತಿಯೊಬ್ಬ ರೈತರು ನಿಮ್ಮ ಜಮೀನಿನಲ್ಲಿ ಬೆಳೆದ ಬೆಳೆ ಮಾಹಿತಿಯನ್ನು ಪಹಣಿಯಲ್ಲಿ ನಿಖರವಾಗಿ ದಾಖಲಿಸುವುದು ತುಂಬಾ ಅಗತ್ಯವಾಗಿದೆ ಇದನ್ನು ಬೆಳೆ ಸಮೀಕ್ಷೆ ಎನ್ನಲಾಗಿದ್ದು ತಾವು ಈ ಕೆಲಸ ಮಾಡಿಸಿಕೊಳ್ಳದಿದ್ದರೆ ಸರ್ಕಾರದಿಂದ ಯಾವುದೇ ಸೌಲಭ್ಯಗಳು ಸಿಗುವುದಿಲ್ಲ. ಬೆಳೆ ಸಮೀಕ್ಷೆ ಇಲ್ಲದಿದ್ದರೆ ವಿಮಾ ಪರಿಹಾರ ನೇರವಾಗಿ ನಿಮ್ಮ ಖಾತೆಗೆ ಹಣ ಜಮಾವಾಗುವುದಿಲ್ಲ. ಬೆಂಬಲ ಬೆಲೆಯಲ್ಲಿ ಬೆಳೆ ಮಾರಾಟ ಮಾಡಲು ಸಮೀಕ್ಷೆಯ ಪಹಣಿ ದಾಖಲೆ ಕಡ್ಡಾಯವಾಗಿರುತ್ತದೆ. ತೀವ್ರ ಮಳೆ ಅಥವಾ ಬರದಿಂದ ಬೆಳೆ ನಾಶವಾದರೆ ಪರಿಹಾರಕ್ಕೆ ಈ ಸಮೀಕ್ಷೆ ಆಧಾರವಾಗಿರುತ್ತದೆ. ಯಾವುದೇ ಬೆಳೆ ಆಧಾರಿತ ಯೋಜನೆಗೆ ಪಹಣಿ ದಾಖಲೆ ಕಡ್ಡಾಯವಾಗಿರುತ್ತದೆ ಎಂದು ತಿಳಿಸಿದ್ದು, ಹೊಸನಗರ ತಾಲ್ಲೂಕಿನ ರೈತರು ತಕ್ಷಣ ತಾವು ಬೆಳೆದ ಬೆಳೆಗೆ ಬೆಳೆ ಸಮೀಕ್ಷೆ ಮಾಡಿಕೊಂಡು ಪಹಣಿಗೆ ದಾಖಲಿಸಿಕೊಳ್ಳಬೇಕೆಂದು ತಿಳಿಸಿದ್ದಾರೆ.
ಬೆಳೆ ಸಮೀಕ್ಷೆ ಮಾಡಲು Google play store ನಲ್ಲಿ ಈ App Download ಮಾಡಿಕೊಳ್ಳಿ 👇 https://play.google.com/store/apps/details?id=com.csk.farmer23_24.cropsurvey

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.