THIRTHAHALLI | ತಾಲೂಕಿನ ದೇವಂಗಿ ಗ್ರಾಪಂ ವ್ಯಾಪ್ತಿಯ ಉಂಟೂರು ಹಳ್ಳದಲ್ಲಿ ಜು.30 ರಂದು ಕೃಷ್ಣಮೂರ್ತಿ ನಾಯ್ಕ (55) ಎಂಬ ರೈತ ಕಾಲುಜಾರಿ ಹಳ್ಳಕ್ಕೆ ಬಿದ್ದು ಮೃತಪಟ್ಟಿದ್ದರು.
ಕೃಷ್ಣಮೂರ್ತಿ ನಾಯ್ಕ ಅವರ ಕುಟುಂಬದವರಿಗೆ ಪ್ರಾಕೃತಿಕ ವಿಕೋಪದ ಅಡಿಯಲ್ಲಿ ಸರ್ಕಾರದಿಂದ ನೀಡುವ ಪರಿಹಾರ ನಿಧಿಯ 5 ಲಕ್ಷ ರೂಪಾಯಿಗಳ ಚೆಕ್ ಅನ್ನು ಮೃತರ ಪುತ್ರ ಪ್ರಸನ್ನರವರಿಗೆ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಸೋಮವಾರ ತೀರ್ಥಹಳ್ಳಿ ತಹಶೀಲ್ದಾರ್ ಕಛೇರಿಯಲ್ಲಿ ವಿತರಿಸಿದರು.

ಈ ಸಂದರ್ಭದಲ್ಲಿ ತಹಸೀಲ್ದಾರ್ ಜಕ್ಕಣ್ಣ ಗೌಡರ್, ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗಳಾದ ಶೈಲಾ, ಕ್ಷೇತ್ರದ ಶಿಕ್ಷಣಾಧಿಕಾರಿ ಗಣೇಶ್ ಸೇರಿದಂತೆ ಅನೇಕ ಕಂದಾಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಹೊಸನಗರದಲ್ಲಿ ಶಿಕ್ಷಕರ ಪ್ರತಿಭಟನೆ, ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಕೆ

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.