ತೀರ್ಥಹಳ್ಳಿ

ತೀರ್ಥಹಳ್ಳಿ : ಗುಡ್ಡ ಕುಸಿದು ಮನೆ ಮೇಲೆ ಮಣ್ಣು: ಒಂದೇ ಕುಟುಂಬದ ಮೂವರು ಸಾವು

ತೀರ್ಥಹಳ್ಳಿ : ಗುಡ್ಡ ಕುಸಿದು ಮನೆ ಮೇಲೆ ಮಣ್ಣು: ಒಂದೇ ಕುಟುಂಬದ ಮೂವರು ಸಾವು – guuda

ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಇಂದಿರಾನಗರ ಪ್ರದೇಶದಲ್ಲಿ ಭಾರಿ ಮಳೆಯ ಪರಿಣಾಮ ಗುಡ್ಡ ಕುಸಿದು ಬಿದ್ದಿದ್ದು, ಮನೆ ಮಣ್ಣಿನಡಿ ಸಿಲುಕಿ ಮೂವರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಗುಡ್ಡದ ಮಣ್ಣು ಸಡಿಲಗೊಂಡು, ಭಾನುವಾರ ಹಠಾತ್ತನೆ ಮಣ್ಣು ಮತ್ತು ಬಂಡೆಗಳು ಕೆಳಭಾಗದಲ್ಲಿದ್ದ ಮನೆಯ ಮೇಲೆ ಕುಸಿದು ಬಿದ್ದಿವೆ ಎನ್ನಲಾಗಿದೆ. ಘಟನೆಯಲ್ಲಿ ಮನೆ ಸಂಪೂರ್ಣವಾಗಿ ಮಣ್ಣಿನಡಿ ಸಿಲುಕಿಕೊಂಡಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ ಮೃತಪಟ್ಟವರನ್ನು ಮಲ್ಲಿಕಾರ್ಜುನ್ (35), ನಾಗವೇಣಿ (28) ಮತ್ತು ಸಂತೋಷ್ (3) ಎಂದು ಗುರುತಿಸಲಾಗಿದೆ. ಮೂವರು ಗುಡ್ಡದ ಸಮೀಪ ನಿರ್ಮಿಸಿದ್ದ ಶೆಡ್‌ನಲ್ಲಿ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಮೃತರು ಮೂಲತಃ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕೊಕ್ಕರೆಗಾರು ಗ್ರಾಮದ ನಿವಾಸಿಗಳು ಎನ್ನಲಾಗಿದೆ.

ಘಟನೆ ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳೀಯ ಆಡಳಿತ ಮತ್ತು ಪೊಲೀಸ್ ಅಧಿಕಾರಿಗಳು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650