ಹೊಸನಗರ ; ತೀರ್ಥಹಳ್ಳಿಯ ವಕೀಲರ ಸಂಘದ ಸದಸ್ಯರಾದ ಮಧುಕರ್ ಮಯ್ಯರವರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು ಹಲ್ಲೆಯನ್ನು ಖಂಡಿಸಿ ಹೊಸನಗರ ಬಾರ್ ಅಸೋಸಿಯೇಷನ್ ವತಿಯಿಂದ ಬಾರ್ ಅಸೋಸಿಯೇಷನ್ ಸಂಘದ ಅಧ್ಯಕ್ಷ ಚಂದ್ರಪ್ಪನವರ ನೇತೃತ್ವದಲ್ಲಿ ಒಂದು ದಿನ ನ್ಯಾಯಾಲಯದ ಕಲಾಪ ಬಹಿಷ್ಕರಿಸಿ ಈ ಕೃತ್ಯದಲ್ಲಿ ತೊಡಗಿರುವ ಎಲ್ಲಾ ಆರೋಪಿಗಳನ್ನು ಕೂಡಲೆ ಬಂಧಿಸಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ವಕೀಲರ ಸಂಘದ ಸದಸ್ಯರಾದ ಷಣ್ಮುಖಪ್ಪ, ಮಂಡಾನಿ ಗುರುಮೂರ್ತಿ, ಪ್ರಶಾಂತ್, ಉಮೇಶ್, ವಾಲೆಮನೆ ಶಿವಕುಮಾರ್, ಈರಪ್ಪ, ಮಹೇಶ್ ಎಂ.ವೈ, ಗಗ್ಗ ಬಸವರಾಜ್, ಕರ್ಣಕುಮಾರ್, ಮೋಹನ್ ಶೆಟ್ಟಿ, ಮಹಾದೇವಪ್ಪ, ರಾಮಚಂದ್ರ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.