ಹಳ್ಳ ದಾಟುವಾಗ ಕಾಲುಜಾರಿ ಬಿದ್ದು ವ್ಯಕ್ತಿ ಸಾವು !

Written by Mahesh Hindlemane

Updated on:

THIRTHAHALLI | ನಿನ್ನೆ ತಾಲೂಕಿನಲ್ಲಿ ಸುರಿದ ಭಾರಿ ಮಳೆಗೆ ನದಿಗಳು, ಹಳ್ಳ-ಕೊಳ್ಳಗಳು ಉಕ್ಕಿ ಹರಿದಿದ್ದು ಹಳ್ಳ ದಾಟಲು ಹೋದ ವ್ಯಕ್ತಿಯೋರ್ವ ನೀರಿನಲ್ಲಿ ಕೊಚ್ಚಿ ಹೋದ ಘಟನೆ ವರದಿಯಾಗಿದೆ.

WhatsApp Group Join Now
Telegram Group Join Now
Instagram Group Join Now

ಮತ್ತೊಂದು ಪ್ರಶಸ್ತಿ ಮುಡಿಗೇರಿಸಿಕೊಂಡ ಹಡ್ಲುಬೈಲು ಶಾಲೆ !

ದೇವಂಗಿ ಗ್ರಾಪಂ ವ್ಯಾಪ್ತಿಯ ಉಂಟೂರು ಗ್ರಾಮದ ಕೃಷ್ಣಮೂರ್ತಿ ನಾಯ್ಕ್ (55) ಮೃತ ವ್ಯಕ್ತಿ. ಈತ ನಿನ್ನೆ ಸಂಜೆ ತನ್ನ ಮನೆ ಬಳಿ ಹಳ್ಳದಾಟುವಾಗ ಕಾಲುಜಾರಿ ಬಿದ್ದು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ರಾತ್ರಿಯಾದರೂ ಕೃಷ್ಣಮೂರ್ತಿ ಮನೆಗೆ ಬಾರದೆ ಇರುವುದರಿಂದ ಕುಟುಂಬಸ್ಥರು ಹುಡುಕಾಟ ನಡೆಸಿದ್ದಾರೆ. ಇಂದು ಬೆಳಗ್ಗೆ ಮನೆ ಬಳಿಯ ಹಳ್ಳದಲ್ಲಿ ಕೃಷ್ಣಮೂರ್ತಿ ಶವವಾಗಿ ಪತ್ತೆಯಾಗಿರುವುದಾಗಿ ತಿಳಿದುಬಂದಿದೆ.

ಮೃತರು ಮಂದಾರ್ತಿ ಮೇಳದ ಯಕ್ಷಗಾನ ಕಲಾವಿದರಾದ ಪ್ರಸನ್ನರವರ ತಂದೆಯಾಗಿದ್ದು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

ತೀರ್ಥಹಳ್ಳಿ ಪೊಲೀಸರಿಂದ ತನಿಖೆ ಆರಂಭಗೊಂಡಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.

School Holiday | ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ತೀರ್ಥಹಳ್ಳಿ ತಾಲ್ಲೂಕಿನಾದ್ಯಂತ ಬುಧವಾರ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

Author Profile

Mahesh Hindlemane
Mahesh Hindlemane
ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.

Leave a Comment