ತೀರ್ಥಹಳ್ಳಿ

ತೀರ್ಥಹಳ್ಳಿ : ಗೋ ಕಳ್ಳತನ ಪ್ರಕರಣದ ಮೂವರು ಆರೋಪಿಗಳ ಬಂಧನ

ತೀರ್ಥಹಳ್ಳಿ ಕಳೆದ ಕೆಲವು ವಾರಗಳಿಂದ ತೀರ್ಥಹಳ್ಳಿ ತಾಲೂಕಿನ ಹಲವಾರು ಭಾಗಗಳಲ್ಲಿ ಗೋ ಕಳ್ಳತನ ಪ್ರಕರಣಗಳು ದಾಖಲಾಗುತ್ತಿದ್ದು, ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿತ್ತು. ವಿಶೇಷವಾಗಿ, ಕಾರಿನಲ್ಲಿ ಗೋವುಗಳನ್ನು ತುಂಬಿಕೊಂಡು ಸಾಗಿಸುತ್ತಿರುವ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದವು. ಇದರಿಂದ ಬಿಜೆಪಿ ವತಿಯಿಂದ ಪ್ರತಿಭಟನೆ ಸಹ ನಡೆದಿತ್ತು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಈ ಹಿನ್ನೆಲೆಯಲ್ಲಿ, ಪ್ರಕರಣದ ತನಿಖೆ ತೀವ್ರಗೊಳಿಸಿದ ತೀರ್ಥಹಳ್ಳಿ ಪೊಲೀಸರು, ಪಟ್ಟಣದ ಬೆಟ್ಟಮಕ್ಕಿಯ ಭೂತರಾಯನಕಟ್ಟೆ ಬಳಿ ಗೋ ಕಳ್ಳತನ ಮಾಡಲು ಬಂದಿದ್ದ ಮೂವರನ್ನು ಸಿಕ್ಕಿಬಿದ್ದರು.

ಬಂಧಿತರಲ್ಲಿ ಶಿವಮೊಗ್ಗ ಮೂಲದ ಮೌಸಿನ್ ಖಾನ್, ಲಿಂಗಾಪುರದ ಮಹಮದ್ ಮುಸ್ತಾಕ್ ಮತ್ತು ಶಿರಾಜ್ ಉದ್ದಿನ್ ಎಂಬವರು ಸೇರಿದ್ದಾರೆ. ಪೊಲೀಸರು ಆರೋಪಿಗಳಿಂದ ಓಮಿನಿ ಕಾರು ಹಾಗೂ ಕಳ್ಳತನಕ್ಕೆ ಬಳಸಿದ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ.

ತನಿಖೆಯಿಂದ ತಿಳಿದುಬಂದಂತೆ, ಈ ಕಳ್ಳರು ರಾತ್ರಿ ವೇಳೆ ರಸ್ತೆ ಬದಿಯಲ್ಲಿ ಮಲಗಿದ್ದ ಜಾನುವಾರುಗಳನ್ನು ಹಿಡಿದು ಕಾರಿನಲ್ಲಿ ತುಂಬಿಕೊಂಡು ಶಿವಮೊಗ್ಗಕ್ಕೆ ಸಾಗಿಸುತ್ತಿದ್ದರು. ನಂತರ ಅವುಗಳನ್ನು ಅಕ್ರಮವಾಗಿ ಮಾರಾಟ ಮಾಡಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಈ ಕಾರ್ಯಾಚರಣೆಯನ್ನು ಡಿ.ವೈ.ಎಸ್.ಪಿ ಅರವಿಂದ್ ಕಲಗುಜ್ಜಿ ಹಾಗೂ ಇನ್ಸ್ಪೆಕ್ಟರ್ ಇಮ್ರಾನ್ ಬೇಗ್ ಅವರ ನೇತೃತ್ವದಲ್ಲಿ ತಂಡ ನಡೆಸಿದ್ದು, ಮಿಂಚಿನ ಕಾರ್ಯಾಚರಣೆಯಲ್ಲಿ ಮೂವರನ್ನೂ ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಬಂಧಿತರಿಂದ ಹೆಚ್ಚಿನ ಮಾಹಿತಿ ಪಡೆಯಲು ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ. ಈ ಬಂಧನದಿಂದ ತೀರ್ಥಹಳ್ಳಿಯಲ್ಲಿನ ಗೋ ಕಳ್ಳತನ ಪ್ರಕರಣಗಳಿಗೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಿವಮೊಗ್ಗ ಜೈಲಿನ ವಿಚಾರಣಾಧೀನ ಕೈದಿ ಅನಾರೋಗ್ಯದಿಂದ ಸಾವು !

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650