ತೀರ್ಥಹಳ್ಳಿ

ತೀರ್ಥಹಳ್ಳಿ ಚೌಡೇಶ್ವರಿ–ಸಯ್ಯಿದ್ ಸಾದತ್ ದರ್ಗಾ ಹುಂಡಿ ಎಣಿಕೆ: ₹1.01 ಕೋಟಿ ನಗದು ಸಂಗ್ರಹ

ತೀರ್ಥಹಳ್ಳಿ ತಾಲ್ಲೂಕಿನ ಶ್ರೀ ಚೌಡೇಶ್ವರಿ–ಸಯ್ಯಿದ್ ಸಾದತ್ ದರ್ಗಾದ ಕಾಣಿಕೆ ಹುಂಡಿ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಭಕ್ತರಿಂದ ₹1,01,73,650 ನಗದು ಸಂಗ್ರಹವಾಗಿದೆ. ಚಿನ್ನ ಮತ್ತು ಬೆಳ್ಳಿಯ ಆಭರಣಗಳೂ ಕಾಣಿಕೆಯಾಗಿ ಬಂದಿದ್ದು, ನಗದು ಮೊತ್ತವನ್ನು ನಿಯಮಾನುಸಾರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ.

ತೀರ್ಥಹಳ್ಳಿ ಚೌಡೇಶ್ವರಿ–ಸಯ್ಯಿದ್ ಸಾದತ್ ದರ್ಗಾ ಹುಂಡಿ ಎಣಿಕೆ: ₹1.01 ಕೋಟಿ ನಗದು ಸಂಗ್ರಹ – darga

ತೀರ್ಥಹಳ್ಳಿ: ತಾಲ್ಲೂಕಿನ ಶ್ರೀ ಚೌಡೇಶ್ವರಿ–ಸಯ್ಯಿದ್ ಸಾದತ್ ದರ್ಗಾದ ಕಾಣಿಕೆ ಹುಂಡಿ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಭಕ್ತರಿಂದ ಒಟ್ಟು ₹1,01,73,650 ನಗದು ಕಾಣಿಕೆ ಸಂಗ್ರಹವಾಗಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಒಂದು ಕೋಟಿ ಒಂದು ಲಕ್ಷ ಎಪ್ಪತ್ತ್ಮೂರು ಸಾವಿರ ಆರುನೂರ ಐವತ್ತು ರೂಪಾಯಿ ನಗದು ಸಂಗ್ರಹವಾಗಿದ್ದು, ಇದರ ಜೊತೆಗೆ ಭಕ್ತಾದಿಗಳು ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನೂ ಕಾಣಿಕೆಯಾಗಿ ಸಮರ್ಪಿಸಿದ್ದಾರೆ.

ಹುಂಡಿ ಎಣಿಕೆ ಬಳಿಕ ಸಂಗ್ರಹವಾದ ನಗದು ಮೊತ್ತವನ್ನು ನಿಯಮಾನುಸಾರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ ಎಂದು ತಿಳಿದುಬಂದಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಹುಂಡಿ ಎಣಿಕೆ ಕಾರ್ಯದ ವೇಳೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್. ಹೇಮಂತ್ ಕುಮಾರ್ ಹಾಗೂ ಉಪವಿಭಾಗಾಧಿಕಾರಿ ಡಾ. ಮೈತ್ರಿ ಅವರು ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ತಹಸೀಲ್ದಾರ್ ರಂಜಿತ್, ಮುಜರಾಯಿ ತಹಸೀಲ್ದಾರ್ ಆರ್. ಪ್ರದೀಪ್, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆರೆಹಳ್ಳಿ ರಾಮಪ್ಪ, ಸಮಿತಿಯ ಸದಸ್ಯರು, ಕಾರ್ಯನಿರ್ವಾಹಕ ಅಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ, ಗ್ರಾಮ ಸಹಾಯಕರು, ದೇವಸ್ಥಾನದ ಸಿಬ್ಬಂದಿ, ಬ್ಯಾಂಕ್ ಸಿಬ್ಬಂದಿ ಹಾಗೂ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650