ತೀರ್ಥಹಳ್ಳಿ

ತೀರ್ಥಹಳ್ಳಿ ನೂತನ ಡಿವೈಎಸ್ಪಿಯಾಗಿ ಡಾ. ಭಾನುಪ್ರಕಾಶ್ ಅಧಿಕಾರ ಸ್ವೀಕಾರ

ತೀರ್ಥಹಳ್ಳಿ ಉಪವಿಭಾಗದ ನೂತನ ಡಿವೈಎಸ್ಪಿಯಾಗಿ ಐಪಿಎಸ್ ಅಧಿಕಾರಿ ಡಾ. ಭಾನುಪ್ರಕಾಶ್ ಅವರು ಅಧಿಕಾರ ಸ್ವೀಕರಿಸಿದರು. ಶಿವಮೊಗ್ಗ ಡಿವೈಎಸ್ಪಿ ಸಂಜೀವ್ ಕುಮಾರ್ ಅವರು ಅಧಿಕಾರ ಹಸ್ತಾಂತರಿಸಿದ್ದು, ಪಿಎಸ್‌ಐ ಸುಷ್ಮಾ ಅವರು ನೂತನ ಡಿವೈಎಸ್ಪಿಯನ್ನು ಬರಮಾಡಿಕೊಂಡರು.

ತೀರ್ಥಹಳ್ಳಿ ನೂತನ ಡಿವೈಎಸ್ಪಿಯಾಗಿ ಡಾ. ಭಾನುಪ್ರಕಾಶ್ ಅಧಿಕಾರ ಸ್ವೀಕಾರ – bhanupraksh

ತೀರ್ಥಹಳ್ಳಿ: ತೀರ್ಥಹಳ್ಳಿ ಉಪವಿಭಾಗದ ನೂತನ ಡಿವೈಎಸ್ಪಿಯಾಗಿ ಐಪಿಎಸ್ ಅಧಿಕಾರಿ ಡಾ. ಭಾನುಪ್ರಕಾಶ್ ಅವರು ಅಧಿಕಾರ ಸ್ವೀಕರಿಸಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದ ಅಧಿಕಾರ ಹಸ್ತಾಂತರ ಪ್ರಕ್ರಿಯೆಯಲ್ಲಿ, ಶಿವಮೊಗ್ಗ ಡಿವೈಎಸ್ಪಿ ಸಂಜೀವ್ ಕುಮಾರ್ ಅವರು ಡಾ. ಭಾನುಪ್ರಕಾಶ್ ಅವರಿಗೆ ಜವಾಬ್ದಾರಿ ಹಸ್ತಾಂತರಿಸಿದರು.

ಬೆಂಗಳೂರು ಮೂಲದ ಐಪಿಎಸ್ ಅಧಿಕಾರಿಯಾಗಿರುವ ಡಾ. ಭಾನುಪ್ರಕಾಶ್ ಅವರು ಇನ್ನು ಮುಂದೆ ತೀರ್ಥಹಳ್ಳಿ ಉಪವಿಭಾಗದ ಕಾನೂನು ಮತ್ತು ಸುವ್ಯವಸ್ಥೆ, ಅಪರಾಧ ನಿಯಂತ್ರಣ ಹಾಗೂ ಪೊಲೀಸ್ ಆಡಳಿತದ ಜವಾಬ್ದಾರಿಗಳನ್ನು ನಿರ್ವಹಿಸಲಿದ್ದಾರೆ.

ತೀರ್ಥಹಳ್ಳಿ ಡಿವೈಎಸ್ಪಿಯಾಗಿದ್ದ ಅರವಿಂದ್ ಕಲಗುಜ್ಜಿ ಅವರು ನಿವೃತ್ತರಾದ ನಂತರ, ಶಿವಮೊಗ್ಗ ಡಿವೈಎಸ್ಪಿ ಸಂಜೀವ್ ಕುಮಾರ್ ಅವರು ತೀರ್ಥಹಳ್ಳಿ ಉಪವಿಭಾಗದ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಡಾ. ಭಾನುಪ್ರಕಾಶ್ ಅಧಿಕಾರ ಸ್ವೀಕರಿಸುವ ಮೂಲಕ ಹುದ್ದೆ ಅಧಿಕೃತವಾಗಿ ಭರ್ತಿಯಾಗಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಈ ಸಂದರ್ಭದಲ್ಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸುಷ್ಮಾ ಅವರು ನೂತನ ಡಿವೈಎಸ್ಪಿ ಡಾ. ಭಾನುಪ್ರಕಾಶ್ ಅವರನ್ನು ಬರಮಾಡಿಕೊಂಡರು.

ಯುವ ಐಪಿಎಸ್ ಅಧಿಕಾರಿ ತೀರ್ಥಹಳ್ಳಿ ಉಪವಿಭಾಗದ ಜವಾಬ್ದಾರಿ ವಹಿಸಿಕೊಂಡಿರುವುದರಿಂದ ಪೊಲೀಸ್ ಆಡಳಿತಕ್ಕೆ ಮತ್ತಷ್ಟು ಚುರುಕು ಬರಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650