THARIKERE | ಸ್ನೇಹಿತರ ಜೊತೆ ಹೆಬ್ಬೆ ಜಲಪಾತಕ್ಕೆ ಬಂದಿದ್ದ ಪ್ರವಾಸಿಗನೋರ್ವ ಜಲಪಾತದಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಹೆಬ್ಬೆ ಜಲಪಾತದಲ್ಲಿ ಭಾನುವಾರ ಸಂಭವಿಸಿದೆ.
ಛತ್ತಿಸಘಡದ ಮೂಲದ ಪ್ರವಾಸಿಗ ಅಮೀತ್ ಕುಮಾರ್ (30) ಮೃತ ದುರ್ದೈವಿ. ಈತ ಮೂಲತಃ ಛತ್ತಿಸ್ ಘಡದವನಾಗಿದ್ದು ಬೆಂಗಳೂರಿನಲ್ಲಿ ವಾಸವಾಗಿದ್ದ ಎನ್ನಲಾಗಿದೆ. ಅದರಂತೆ ಭಾನುವಾರ ಸ್ನೇಹಿತರ ಜತೆ ಕೆಮ್ಮಣ್ಣುಗುಂಡಿ ಸಮೀಪದ ಹೆಬ್ಬೆ ಜಲಪಾತಕ್ಕೆ ತೆರಳಿದ ವೇಳೆ ಈಜಲು ಹೋಗಿ ನೀರುಪಾಲಾಗಿರುವ ಘಟನೆ ನಡೆದಿದೆ.

ಘಟನೆ ಸಂಬಂಧ ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.