ಹೊಸನಗರ ; ಕಾಲುಜಾರಿ ಪ್ರವಾಸಕ್ಕೆ ಬಂದಿದ್ದ ಯುವಕ ನೀರುಪಾಲಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಯಡೂರು ಸಮೀಪದ ಅಬ್ಬಿ ಫಾಲ್ಸ್ ನಲ್ಲಿ ನಡೆದಿದೆ.
ಬೆಂಗಳೂರಿನ ನಾಗರಬಾವಿಯ ಖಾಸಗಿ ಕಂಪನಿಯೊಂದರ ಮ್ಯಾನೇಜರ್ ಆಗಿದ್ದ ರಮೇಶ್ ಎಂಬಾತ ನೀರುಪಾಲಾದ ಪ್ರವಾಸಿಗ. ಯಡೂರಿನ ಅಬ್ಬಿ ಜಲಪಾತದಲ್ಲಿ ನೀರಿಗೆ ಇಳಿದಿದ್ದ ರಮೇಶ್ ಕಾಲು ಜಾರಿ ಬಿದ್ದಿದ್ದಾರೆ. ಈ ವೇಳೆ ವಿಡಿಯೋಗೆ ಪೋಸ್ ನೀಡುತ್ತಿದ್ದ ಯುವಕ ಏಕಾಏಕಿ ಕಾಲು ಜಾರಿ ನೀರು ಪಾಲಾಗಿದ್ದಾನೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವೂ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಈ ಘಟನೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
Malnad Times App ಡೌನ್ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

