Accident

ಸಿಗಂದೂರಿಗೆ ತೆರಳುತ್ತಿದ್ದ ಪ್ರವಾಸಿಗರ ಕಾರು ಪಲ್ಟಿ, ಬೆಂಗಳೂರು ಮೂಲದ ಯುವಕ ಸಾವು !

SHIVAMOGGA ; ಸಿಗಂದೂರಿಗೆ ತೆರಳುತ್ತಿದ್ದ ಪ್ರವಾಸಿಗರ ಕಾರೊಂದು ಪಲ್ಟಿಯಾಗಿ ಬೆಂಗಳೂರು ಮೂಲದ ಯುವಕ ಸಾನ್ನಪ್ಪಿದ ಘಟನೆ ಶಿವಮೊಗ್ಗ ತಾಲೂಕಿನ ಕುಂಸಿ ಸಮೀಪದ ಕೆರೆಕೋಡಿ ಬಳಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಶಿವಗಂಗೆಬೆಟ್ಟದ ನಿವಾಸಿ ಚಂದನ್‌ (26) ಮೃತ ಯುವಕ. ಚಾಲಕನ ನಿಯಂತ್ರಣ ತಪ್ಪಿ ಭತ್ತದ ಗದ್ದೆಗೆ ಕಾರು ಪಲ್ಟಿಯಾಗಿದ್ದು ಮಡಿಕೇರಿ ಮೂಲದ ನಂದನ್ (22), ಕೋಲಾರ ಮೂಲದ ಕೋದಂಡ(18), ಮಂಡ್ಯ ಮೂಲದ ಯೋಗೇಶ್ (24) ಹಾಗೂ ಹಾಸನ ಮೂಲದ ಭರತ್(20) ಗಾಯಗೊಂಡ ಯುವಕರು.

ಬೆಂಗಳೂರಿನ ಯಲಹಂಕದಲ್ಲಿರುವ ಅಮೃತಹಳ್ಳಿ ವಿಬಿಎಸ್ ಅಯ್ಯಂಗಾರ್ ಬೇಕರಿಯಲ್ಲಿ ಕೆಲಸ ಮಾಡಿಕೊಂಡಿದ್ದ 5 ಜನ ಯುವಕರು ಇಂದು ಬೇಕರಿಗೆ ರಜೆ ಇದ್ದ ಕಾರಣ ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ತೆರಳಲು ನಿರ್ಧರಿಸಿದ್ದರು. ಅದರಂತೆ ನಿನ್ನೆ ರಾತ್ರಿ ವೇಳೆಗೆ ಬೆಂಗಳೂರಿನಿಂದ ಹೊರಟ್ಟಿದ್ದರು. ಇಂದು ಬೆಳಿಗ್ಗೆ ಶಿವಮೊಗ್ಗದಿಂದ ಸಾಗರ ಮಾರ್ಗವಾಗಿ ಕುಂಸಿಯ ಕೆರೆಕೋಡಿ ಬಳಿ ತೆರಳುತ್ತಿದ್ದ ವೇಳೆ ಕಾರು ಪಲ್ಟಿಯಾಗಿ ಭತ್ತದ ಗದ್ದೆಗೆ ಬಿದ್ದಿದೆ. ಕಾರು ಚಾಲನೆ ಮಾಡುತ್ತಿದ್ದ ಚಂದನ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಕಾರಿನಲ್ಲಿದ್ದ ಇತರ ಯುವಕರು ಸಹ ಗಾಯಗೊಂಡಿದ್ದು, ಸ್ಥಳೀಯರು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಘಟನಾ ಸ್ಥಳಕ್ಕೆ ಕುಂಸಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ‌.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]