ಹೊಸನಗರ

ಹೊಸನಗರದಲ್ಲಿ ವಿದ್ಯುತ್ ಸಮಸ್ಯೆ ; ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ಶಾಸಕ ಬೇಳೂರು ಗೋಪಾಲಕೃಷ್ಣರಿಗೆ ವರ್ತಕರ ಸಂಘದಿಂದ ಮನವಿ

ಪಟ್ಟಣದಲ್ಲಿ ನಿರಂತರವಾಗಿ ಕಾಡುತ್ತಿರುವ ವಿದ್ಯುತ್ ವ್ಯತ್ಯಯ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ಇಲ್ಲವಾದಲ್ಲಿ ವಿದ್ಯುತ್ ಬಿಲ್ ಪಾವತಿಸದೆ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಹೊಸನಗರ ವರ್ತಕರ ಸಂಘ ಎಚ್ಚರಿಕೆ ನೀಡಿದೆ.

InShot 20260907 222723111

ಹೊಸನಗರ : ಪಟ್ಟಣದಲ್ಲಿ ನಿರಂತರವಾಗಿ ಕಾಡುತ್ತಿರುವ ವಿದ್ಯುತ್ ವ್ಯತ್ಯಯ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ಇಲ್ಲವಾದಲ್ಲಿ ವಿದ್ಯುತ್ ಬಿಲ್ ಪಾವತಿಸದೆ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಹೊಸನಗರ ವರ್ತಕರ ಸಂಘ ಎಚ್ಚರಿಕೆ ನೀಡಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಈ ಸಂಬಂಧ ವರ್ತಕರ ಸಂಘದ ಪದಾಧಿಕಾರಿಗಳು ಇಂದು ಶಾಸಕ ಬೇಳೂರು ಗೋಪಾಲಕೃಷ್ಣ ಅವರನ್ನು ಭೇಟಿ ಮಾಡಿ ಅಹವಾಲು ಸಲ್ಲಿಸಿದರು.

ಪಟ್ಟಣದಲ್ಲಿ ಪದೇಪದೇ ವಿದ್ಯುತ್ ಕಡಿತವಾಗುತ್ತಿರುವುದರಿಂದ ವ್ಯಾಪಾರ-ವಹಿವಾಟಿಗೆ ಮಾತ್ರವಲ್ಲದೆ ಸಾರ್ವಜನಿಕರ ದೈನಂದಿನ ಚಟುವಟಿಕೆಗಳಿಗೂ ತೀವ್ರ ತೊಂದರೆಯಾಗುತ್ತಿದೆ. ವಿದ್ಯುತ್ ವ್ಯತ್ಯಯದಿಂದ ವ್ಯಾಪಾರಸ್ಥರು ಹಲವು ರೀತಿಯ ನಷ್ಟ ಎದುರಿಸುತ್ತಿದ್ದು, ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ವರ್ತಕರು ಒತ್ತಾಯಿಸಿದರು.

ಬಿಲ್ ಪಾವತಿಸದೆ ಪ್ರತಿಭಟನೆ :

ವಿದ್ಯುತ್ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸದಿದ್ದರೆ ಮುಂದಿನ ದಿನಗಳಲ್ಲಿ ವರ್ತಕರು ವಿದ್ಯುತ್ ಬಿಲ್ ಪಾವತಿಸದೆ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಸಂಘದ ಪದಾಧಿಕಾರಿಗಳು ಶಾಸಕರ ಗಮನಕ್ಕೆ ತಂದರು.

ಮೆಸ್ಕಾಂ ಎಂಡಿ ಜೊತೆ ನೇರ ಚರ್ಚೆಗೆ ಅವಕಾಶ :

ವರ್ತಕರ ಅಹವಾಲು ಸ್ವೀಕರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ ಅವರು, ಕ್ಷೇತ್ರದ ವಿದ್ಯುತ್ ಸಮಸ್ಯೆ ಬಗೆಹರಿಸುವುದು ತಮ್ಮ ಮೊದಲ ಆದ್ಯತೆಯಾಗಿದೆ ಎಂದು ಭರವಸೆ ನೀಡಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಈ ಕುರಿತು ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರನ್ನು (MD) ಖುದ್ದಾಗಿ ಭೇಟಿ ಮಾಡಿ ಚರ್ಚಿಸುವುದಾಗಿ ತಿಳಿಸಿದ ಅವರು, ಶೀಘ್ರದಲ್ಲೇ ಮೆಸ್ಕಾಂ ಎಂಡಿ ಅವರನ್ನು ಹೊಸನಗರಕ್ಕೆ ಕರೆತಂದು ವರ್ತಕರು ಹಾಗೂ ಸಾರ್ವಜನಿಕರೊಂದಿಗೆ ‘ನೇರಾನೇರ ಚರ್ಚೆ’ ನಡೆಸಲು ಅವಕಾಶ ಕಲ್ಪಿಸುವುದಾಗಿ ಹೇಳಿದರು.

ಅಲ್ಲದೆ, ಹೊಸನಗರದ ವಿದ್ಯುತ್ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ವಿದ್ಯುತ್ ಗ್ರಿಡ್ ನಿರ್ಮಾಣಕ್ಕಾಗಿ ಈಗಾಗಲೇ ಜಾಗ ಗುರುತಿಸುವ ಕಾರ್ಯ ನಡೆಯುತ್ತಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ವರ್ತಕರ ಸಂಘದ ಅಧ್ಯಕ್ಷ ಪೂರ್ಣೇಶ್ ಮಲೆಬೈಲು, ಪ್ರಮುಖ ಪದಾಧಿಕಾರಿಗಳಾದ ಹರೀಶ್ ರಾವ್, ಸುರೇಶ್ ಬಿ.ಎಸ್., ಸಂತೋಷ್ ಶೇಟ್, ಲೋಕೇಶ್ ಆದುವಳ್ಳಿ, ಹರೀಶ್ ಹರ್ಷ, ನರಸಿಂಗರಾಮ್ ಪಟೇಲ್, ಉದಯ್ ಕುಮಾರ್, ವಿಠಲ್ ರಾವ್, ಭೋಜಪ್ಪ ಗೌಡ, ನಿಖಿಲ್, ಗೌತಮ್, ರವಿ ಶೆಟ್ರು, ಪವನ್ ಚಂದ್ರಶೇಖರ್, ನೇತ್ರಾವತಿ, ವೆಂಕಟೇಶ್, ಗಣಪತಿ ಭಟ್, ಲಕ್ಷ್ಮೀಶ ಸೇರಿದಂತೆ ಸಂಘದ ಹಲವು ಸದಸ್ಯರು ಉಪಸ್ಥಿತರಿದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]