THIRTHAHALLI ; ವಾಹನವೊಂದರ ಬ್ರೇಕ್ ಫೇಲ್ ನಿಂದಾಗಿ ರಸ್ತೆಯ ಎರಡೂ ಬದಿ ಎಲ್ಲಾ ವಾಹನಗಳ ಓಡಾಟಕ್ಕೆ ತೊಂದರೆಯಾಗಿ ಸಂಪೂರ್ಣ ಟ್ರಾಫಿಕ್ ಜಾಮ್ ಉಂಟಾದ ಘಟನೆ ಶಿವಮೊಗ್ಗ ಜಿಲ್ಲೆಯ ಆಗುಂಬೆ ಘಾಟಿಯಲ್ಲಿ ನಡೆದಿದೆ.
ತೀರ್ಥಹಳ್ಳಿ ಭಾಗದಿಂದ ಉಡುಪಿ ಕಡೆ ಹಾಗೂ ಉಡುಪಿ ಕಡೆಯಿಂದ ತೀರ್ಥಹಳ್ಳಿ ಕಡೆಗೆ ಬರುವ ವಾಹನಗಳು ಕಳೆದ ಕೆಲ ಗಂಟೆಗಳಿಂದ ನಿಂತಲ್ಲಿಯೇ ನಿಂತಿದ್ದು ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ.

ಇದರ ನಡುವೆಯೇ ಆಂಬ್ಯುಲೆನ್ಸ್ ಗಳು ಸಹ ಓಡಾಟ ನಡೆಸಲು ಪರದಾಟ ನಡೆಸುತ್ತಿವೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ವಾಹನ ಓಡಾಟಕ್ಕೆ ಅನುವು ಮಾಡಿಕೊಡಲು ಹರಸಾಹಸ ಪಡುತ್ತಿದ್ದಾರೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.