ಶಿವಮೊಗ್ಗ

SHIVAMOGGA | ಈದ್ ಮಿಲಾದ್ ಹಬ್ಬದ ಮೆರವಣಿಗೆ ಪ್ರಯುಕ್ತ ವಾಹನ ಸಂಚಾರ ಮಾರ್ಗ ಬದಲಾವಣೆ

SHIVAMOGGA ; ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮುಸ್ಲಿಂ ಬಾಂಧವರು ಸೆ.22ರಂದು ಶಿವಮೊಗ್ಗ ನಗರದಲ್ಲಿ ಮೆರವಣಿಗೆಯನ್ನು ಮಾಡುವುದರಿಂದ ನಗರದಲ್ಲಿ ಸಂಚಾರ ಸುಗಮಗೊಳಿಸುವ ಸಲುವಾಗಿ ಈ ಕೆಳ ಕಂಡಂತೆ ವಾಹನ ಸಂಚಾರ ನಿಷೇಧ, ನಿಲುಗಡೆ ಹಾಗೂ ವಾಹನಗಳ ಮಾರ್ಗ ಬದಲಾವಣೆ ಮಾಡಲು ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆಯವರು ತಾತ್ಕಾಲಿಕ ಅಧಿಸೂಚನೆಯನ್ನು ಹೊರಡಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಸೆ. 22 ರಂದು ಈದ್ ಮಿಲಾದ್ ಮೆರವಣಿಗೆ ಶಿವಮೊಗ್ಗ ನಗರದ ಗಾಂಧಿಬಜಾರ್‌ನ ಜಾಮೀಯ ಮಸೀದಿಯಿಂದ ಪ್ರಾರಂಭಗೊಂಡು ಗಾಂಧಿ ಬಜಾರ್ 2ನೇ ಕ್ರಾಸ್, ನಾಗಪ್ಪನ ಕೇರಿ, ಲಷ್ಕರ್ ಮೊಹಲ್ಲಾ ಮುಖ್ಯ ರಸ್ತೆಯ ಓಲ್ಡ್ಬಾರ್ ಲೈನ್ ರಸ್ತೆ – ಪೆನ್ಷನ್ ಮೊಹಲ್ಲಾ – ಬಾಲ್‌ರಾಜ್ ಅರಸ್ ರಸ್ತೆ – ಮಹಾವೀರ ಸರ್ಕಲ್ – ಗೋಪಿ ಸರ್ಕಲ್ – ನೆಹರು ರಸ್ತೆ – ಅಮೀರ್ ಅಹ್ಮದ್ ಸರ್ಕಲ್ ಮಾರ್ಗವಾಗಿ ಬಿಹೆಚ್ ರಸ್ತೆ – ಅಶೋಕ ಸರ್ಕಲ್ – ಎನ್ ಟಿ ರಸ್ತೆ – ಗುರುದೇವ ರಸ್ತೆ – ರ್ಕ್ಲಾಕ್ ಪೇಟೆ, ನೂರಾನಿ ಮಸೀದಿ ಕೆಆರ್ ಪುರಂ ರಸ್ತೆ ಮಾರ್ಗವಾಗಿ ಆಮೀರ್ ಅಹಮ್ಮದ್ ಸರ್ಕಲ್ ತಲುಪುತ್ತದೆ.

ಭದ್ರಾವತಿ, ಬೆಂಗಳೂರು, ಎನ್.ಆರ್.ಪುರ ಕಡೆಯಿಂದ ಬರುವ ಎಲ್ಲಾ ಭಾರಿ ವಾಹನ ಮತ್ತು ಎಲ್ಲಾ ಬಸ್ ಗಳು ಎಂ.ಆರ್.ಎಸ್ ಸರ್ಕಲ್ ನಿಂದ ಬೈಪಾಸ್ ರಸ್ತೆ ಮುಖಾಂತರ ಹೋಗುವುದು.

ಚಿತ್ರದುರ್ಗ, ಹೊಳೆಹೊನ್ನೂರಿನಿಂದ ಬರುವ ಮತ್ತು ಹೋಗುವ ಎಲ್ಲಾ ಭಾರಿ ವಾಹನ ಮತ್ತು ಬಸ್ ಗಳು ಹೊಳೆಹೊನ್ನೂರು ಸರ್ಕಲ್, ಎಂ.ಆರ್.ಎಸ್ ಸರ್ಕಲ್ ಮಾರ್ಗವಾಗಿ ಬೈಪಾಸ್ ರಸ್ತೆ ಮುಖಾಂತರ ಹೋಗುವುದು.

ಹೊನ್ನಾಳಿ, ದಾವಣಗೆರೆಯಿಂದ ಬರುವ ಎಲ್ಲಾ ಭಾರೀ ವಾಹನ ಮತ್ತು ಬಸ್‌ಗಳು ಸಂಗೊಳ್ಳಿ ರಾಯಣ್ಣ ಸರ್ಕಲ್, ಶಂಕರ ಮಠ ಸರ್ಕಲ್, ಹೊಳೆಹೊನ್ನೂರು ಸರ್ಕಲ್ ವಿದ್ಯಾನಗರ, ಎಂ.ಆರ್.ಎಸ್ ಸರ್ಕಲ್ ಮಾರ್ಗವಾಗಿ ಬೈಪಾಸ್ ರಸ್ತೆ ಮುಖಾಂತರ ಹೋಗುವುದು.

ಕೆ.ಎಸ್.ಆರ್.ಟಿ.ಸಿ. ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಹೊನ್ನಾಳಿ ಹರಿಹರ, ದಾವಣಗೆರೆಗೆ ಹೋಗುವ ಎಲ್ಲಾ ಬಸ್‌ಗಳು ಮತ್ತು ಭಾರಿ ಸರಕು ವಾಹನಗಳು ಬೈಪಾಸ್ ಮುಖಾಂತರವಾಗಿ ಎಂ.ಆರ್.ಎಸ್ ಸರ್ಕಲ್, ವಿದ್ಯಾನಗರ ಶಂಕರಮಠ ಸರ್ಕಲ್, ಸಂಗೊಳ್ಳಿರಾಯಣ್ಣ ಸರ್ಕಲ್ ಮುಖಾಂತರ ಹೋಗುವುದು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಕೆ.ಎಸ್.ಆರ್.ಟಿ.ಸಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಬೆಂಗಳೂರು, ಭದ್ರಾವತಿ ಕಡೆಗೆ ಹೋಗುವ ಎಲ್ಲಾ ವಾಹನಗಳು ಬೈಪಾಸ್ ರಸ್ತೆ ಎಂ.ಆರ್.ಎಸ್ ಸರ್ಕಲ್ ಮುಖಾಂತರ ಹೋಗುವುದು.

ಶಿಕಾರಿಪುರ, ಸೊರಬ, ಆನವಟ್ಟಿ ಕಡೆಯಿಂದ ಶಿವಮೊಗ್ಗಕ್ಕೆ ಬರುವ ಮತ್ತು ಹೊರ ಹೋಗುವ ಎಲ್ಲಾ ಬಸ್‌ಗಳು ಮತ್ತು ಭಾರಿ ವಾಹನಗಳು ಉಷಾ ನರ್ಸಿಂಗ್ ಹೋಂ ಸರ್ಕಲ್, ಲಕ್ಷ್ಮೀ ಟಾಕೀಸ್ ಸರ್ಕಲ್ ಪೊಲೀಸ್ ಚೌಕಿ, ಆಲ್ಕೋಳ ಸರ್ಕಲ್ ಮಾರ್ಗವಾಗಿ ಸಾಗರ ರಸ್ತೆಯಲ್ಲಿ ಸಂಚರಿಸುವುದು.

ವಾಹನಗಳ ಸಂಚಾರ ಮತ್ತು ನಿಲುಗಡೆ ನಿಷೇಧ :

ಲಷ್ಕರ್ ಮೊಹಲ್ಲಾ ರಸ್ತೆಯಲ್ಲಿ ಎಲ್ಲಾ ವಾಹನಗಳ ಸಂಚಾರ ನಿಷೇಧ ಮಾಡುವುದು. ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮೆರವಣಿಗೆ ಮಾರ್ಗವಾದ ಗಾಂಧಿಬಜಾರ್ ಜಾಮೀಯ ಮಸೀದಿಯಿಂದ – ಗಾಂಧಿಬಜಾರ್ 2ನೇ ಕ್ರಾಸ್ – ನಾಗಪ್ಪ ಕೇರಿ, ಲಷ್ಕರ್ ಮೊಹಲ್ಲಾ ಮುಖ್ಯ ರಸ್ತೆ – ಓಲ್ಡ್ ಬಾರ್ ಲೈನ್ ರಸ್ತೆ-ಪೆನ್ಷನ್ ಮೊಹಲ್ಲಾ – ಬಾಲ್ ರಾಜ್ ಅರಸ್ ರಸ್ತೆ – ಮಹಾವೀರ್ ಸರ್ಕಲ್, ಗೋಪಿ ಸರ್ಕಲ್, ನೆಹರು ರಸ್ತೆ – ಅಮೀರ್ ಆಹ್ಮದ್ ಸರ್ಕಲ್ – ಬಿ.ಹೆಚ್ ರಸ್ತೆ – ಅಶೋಕ ಸರ್ಕಲ್ – ಎನ್ ಟಿ ರಸ್ತೆ – ಗುರುದೇವ ರಸ್ತೆ – ಕ್ಲಾರ್ಕಪೇಟೆ – ನೂರಾನಿ ಮಸೀದಿ – ಕೆ.ಆರ್.ಪುರಂ ರಸ್ತೆ ಮಾರ್ಗವಾಗಿ ಅಮೀರ್ ಅಹ್ಮದ್ ಸರ್ಕಲ್ ವರೆಗಿನ ಮೆರವಣಿಗೆ ಮಾರ್ಗದಲ್ಲಿ ಮತ್ತು ಮಾರ್ಗದ ಸುತ್ತ ಮುತ್ತ 100 ಮೀಟರ್ ಅಂತರದಲ್ಲಿ ಎಲ್ಲಾ ವಾಹನಗಳ ಸಂಚಾರ ಮತ್ತು ವಾಹನ ನಿಲುಗಡೆ ನಿಷೇಧಿಸಲಾಗಿದೆ.

ಈ ಎಲ್ಲಾ ಮಾರ್ಗ ಬದಲಾವಣೆಗಳು ಪೊಲೀಸ್ ವಾಹನಗಳು, ಅತಿಗಣ್ಯ ವ್ಯಕ್ತಿಗಳ ವಾಹನಗಳು ಅಂಬುಲೆನ್ಸ್ ಹಾಗೂ ಮೂಲಭೂತ ಸೌಕರ್ಯ ಒದಗಿಸುವ ವಾಹನಗಳನ್ನು ಅನುಕೂಲಕ್ಕೆ ತಕ್ಕಂತೆ ಹೊರತುಪಡಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>