ಸುಂಟರಗಾಳಿಗೆ ಧರೆಗುರುಳಿದ ಮರಗಳು, ಹಾರಿಹೋದ ಮನೆಗಳ ಮೇಲ್ಛಾವಣಿ ; ಅಪಾರ ನಷ್ಟ

Written by malnadtimes.com

Updated on:

ರಿಪ್ಪನ್‌ಪೇಟೆ ; ಏಕಾಏಕಿ ಬಂದ ಭಾರಿ ಪ್ರಮಾಣದ ಸುಂಟರಗಾಳಿಗೆ ವಿದ್ಯುತ್ ಕಂಬ, ಮರಗಳು ಧರೆಗುರುಳಿದ್ದು ಹಲವು ಮನೆಗಳ ಮೇಲ್ಛಾವಣಿ ಹಾರಿಹೋಗಿ ಅಪಾರ ಪ್ರಮಾಣದ ನಷ್ಟ ಸಂಭವಿಸಿದ ಘಟನೆ ಇಲ್ಲಿನ ಗವಟೂರು ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಈ ಘಟನೆಯಲ್ಲಿ ಶಾಲೆಯ ಕಾಂಪೌಂಡ್, ವಿದ್ಯುತ್ ಕಂಬಗಳು ಹಾಗೂ ಮರಗಳು, ತೆಂಗಿನಮರ ಧರಾಶಾಹಿಯಾಗಿದ್ದು, ಅನೇಕ ಮನೆಗಳ ಹೆಂಚುಗಳು, ಶೀಟುಗಳು ಗಾಳಿಯ ಆರ್ಭಟಕ್ಕೆ ಹಾರಿಹೋಗಿ ಅಪಾರ ನಷ್ಟ ಸಂಭವಿಸಿದೆ.

ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಮರ, ವಿದ್ಯುತ್ ಕಂಬಗಳು ರಸ್ತೆ ಮೇಲೆ ಉರುಳಿ ಬಿದ್ದಿದ್ದರಿಂದ ಕೆಲಕಾಲ ಹೊಸನಗರ – ರಿಪ್ಪನ್‌ಪೇಟೆ ಸಂಚಾರ ಅಸ್ತವ್ಯಸ್ತವಾಗಿತ್ತು.

ಘಟನಾ ಸ್ಥಳಕ್ಕೆ ರಿಪ್ಪನ್‌ಪೇಟೆ ಪಿಎಸ್ಐ ಪ್ರವೀಣ್ ಎಸ್ ಪಿ ಹಾಗೂ ಸಿಬ್ಬಂದಿಗಳು, ಗ್ರಾ.ಪಂ ಸದಸ್ಯೆ ಮಂಜುಳಾ ಕೆ ರಾವ್, ಪಿಡಿಒ ನಾಗರಾಜ್ ಎಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Comment