ಹೊಸನಗರ ; 3ನೇ ಬಾರಿ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪೆರೇಡ್ ನ ಪಥ ಸಂಚಲನದಲ್ಲಿ ಭಾಗವಹಿಸಲು ಆಯ್ಕೆಯಾಗುವ ಮೂಲಕ ತಾಲೂಕಿಗೆ ಕೀರ್ತಿ ತಂದ CRPF ಯೋಧೆ ಕು. ಚಾಂದಿನಿ ಅವರ ಪೋಷಕರಾದ ಧರ್ಮಪ್ಪ ದಂಪತಿಗಳನ್ನು ಸ್ವಾಮಿ ವಿವೇಕಾನಂದ ಯುವ ವೇದಿಕೆ ವತಿಯಿಂದ ಅಭಿನಂದಿಸಲಾಯಿತು.
ಈ ವೇಳೆ ಸ್ವಾಮಿ ವಿವೇಕಾನಂದ ವೇದಿಕೆ ಸಂಚಾಲಕ ನಗರ ನಿತಿನ್, ಸಂಘಟನಾ ಕಾರ್ಯದರ್ಶಿ ಸಂತೋಷ್ ಮಂಡ್ರಿ ಪ್ರಮುಖರಾದ ಗಣಪತಿ ಬೆಳಗೋಡು, ಶ್ರೀಧರ್ ಚಿಕ್ಕನಕೊಪ್ಪ, ಮಂಜುನಾಥ್, ರಾಘವೇಂದ್ರ , ವಿಕ್ರಂ ಭಟ್, ಸಚಿನ್, ಗೋವರ್ಧನ್, ಪ್ರಮೋದ್, ಸುಮುಖ್, ಬೋಜಪ್ಪ, ವಸಂತ್ ಹಾಗೂ ಸಂಘಟನೆಯ ಇತರರು ಇದ್ದರು.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.