ಸಿಗಂದೂರಿಗೆ ತೆರಳುತ್ತಿದ್ದ ಟಿಟಿ ವಾಹನ ಪಲ್ಟಿ ; ಗಾಯಾಳುಗಳು ಆಸ್ಪತ್ರೆಗೆ

Written by Mahesha Hindlemane

Published on:

ಸಾಗರ ; ಇಲ್ಲಿನ ಆವಿನಹಳ್ಳಿ ಬಳಿ ಟಿಟಿ ವಾಹನವೊಂದು ಪಲ್ಟಿಯಾದ ಪರಿಣಾಮ 13 ಮಂದಿಗೆ ಗಾಯಗೊಂಡ ಘಟನೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಗಾಯಾಳುಗಳನ್ನು ಸಾಗರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಾಳುಗಳ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಿದ್ದಾರೆ. 

ಬೆಂಗಳೂರು ಮೂಲದ ಪ್ರವಾಸಿಗರು ಸಿಗಂದೂರು ಚೌಡೆಶ್ವರಿಯ ದರ್ಶನಕ್ಕಾಗಿ ಸಾಗರದವರೆಗೂ ರೈಲಿನಲ್ಲಿ ಬಂದಿದ್ದರು. ಅಲ್ಲಿಂದ ಟೆಂಪೋ ಟ್ರಾವೆಲರ್ ವಾಹನ ಬಾಡಿಗೆಗೆ ಪಡೆದು ಸಿಗಂದೂರಿಗೆ ಹೊರಟಿದ್ದು, ಕೊರನಕೊಪ್ಪ ಗ್ರಾಮದ ಬಳಿ ಈ ವಾಹನ ಪಲ್ಟಿಯಾಗಿದೆ.

ವಾಹನದಲ್ಲಿ ಪ್ರಯಾಣಿಸುತ್ತಿದ್ದ 12 ಮಹಿಳೆಯರು ಮತ್ತು ಚಾಲಕ ಸೇರಿ ಒಟ್ಟು 13 ಮಂದಿ ಗಾಯಗೊಂಡಿದ್ದು ಇದರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Leave a Comment