ತೀರ್ಥಹಳ್ಳಿ: ಪಟ್ಟಣದ ಶ್ರೀ ರಾಮೇಶ್ವರ ದೇವಾಲಯದ ಸಮೀಪದಲ್ಲಿ ಮಘೆ ಮಳೆಯ ಆರ್ಭಟಕ್ಕೆ ಉಕ್ಕಿ ಹರಿಯುತ್ತಿರುವ ತುಂಗಾನದಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಬಾಗಿನ ಅರ್ಪಿಸಿದರು.
ಮಲೆನಾಡಿನ ಜೀವ ನದಿ ತುಂಗೆ ಈ ಬಾರಿ ಎರಡು ಬಾರಿ ಉಕ್ಕಿ ಹರಿದು ಶ್ರೀ ರಾಮ ಮಂಟಪ ಮುಳುಗುವಂತಾಗಿದೆ.ಕ್ಷೇತ್ರದ ಜನರ ಬದುಕು ಹಸನಾಗಲು ತುಂಗೆ ಸದಾ ಕಾಲ ಕಾಪಾಡಲಿ ಎಂದು ಶಾಸಕರು ಮಾತನಾಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ರಂಜಿತ್, ಎಂಐಡಿಬಿ ಅಧ್ಯಕ್ಷ ಆರ್.ಎಂ.ಮಂಜುನಾಥ್ ಗೌಡ,ಪ.ಪಂ.ಅಧ್ಯಕ್ಷ ರಹಮತ್ ಅಜಾದಿ,ಪ.ಪಂ.ಉಪಾಧ್ಯಕ್ಷೆ ಗೀತಾರಮೇಶ್,ಪ.ಪಂ.ಸದಸ್ಯರು,ತಾ.ಪಂ.ಕಾರ್ಯನಿರ್ವಾಹಣಾಧಿಕಾರಿ ಶೈಲಾ ಮುಂತಾದವರಿದ್ದರು.
MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650