ತೀರ್ಥಹಳ್ಳಿ

ತೀರ್ಥಹಳ್ಳಿ: ಶಾಸಕರಿಂದ ತುಂಗೆಗೆ ಬಾಗಿನ ಅರ್ಪಣೆ

ತೀರ್ಥಹಳ್ಳಿ: ಪಟ್ಟಣದ ಶ್ರೀ ರಾಮೇಶ್ವರ ದೇವಾಲಯದ ಸಮೀಪದಲ್ಲಿ ಮಘೆ ಮಳೆಯ ಆರ್ಭಟಕ್ಕೆ ಉಕ್ಕಿ ಹರಿಯುತ್ತಿರುವ ತುಂಗಾನದಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಬಾಗಿನ ಅರ್ಪಿಸಿದರು.

WhatsApp Group Join Now
Telegram Group Join Now
Instagram Group Join Now

ಮಲೆನಾಡಿನ ಜೀವ ನದಿ ತುಂಗೆ ಈ ಬಾರಿ ಎರಡು ಬಾರಿ ಉಕ್ಕಿ ಹರಿದು ಶ್ರೀ ರಾಮ ಮಂಟಪ ಮುಳುಗುವಂತಾಗಿದೆ.ಕ್ಷೇತ್ರದ ಜನರ ಬದುಕು ಹಸನಾಗಲು ತುಂಗೆ ಸದಾ ಕಾಲ ಕಾಪಾಡಲಿ ಎಂದು ಶಾಸಕರು ಮಾತನಾಡಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ರಂಜಿತ್, ಎಂಐಡಿಬಿ ಅಧ್ಯಕ್ಷ ಆರ್.ಎಂ.ಮಂಜುನಾಥ್ ಗೌಡ,ಪ.ಪಂ.ಅಧ್ಯಕ್ಷ ರಹಮತ್ ಅಜಾದಿ,ಪ.ಪಂ.ಉಪಾಧ್ಯಕ್ಷೆ ಗೀತಾರಮೇಶ್,ಪ.ಪಂ.ಸದಸ್ಯರು,ತಾ.ಪಂ.ಕಾರ್ಯನಿರ್ವಾಹಣಾಧಿಕಾರಿ ಶೈಲಾ ಮುಂತಾದವರಿದ್ದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650