Chikmagaluru News

ಕಾಡಾನೆ ದಾಳಿಗೆ ಇಬ್ಬರು ರೈತರು ದುರ್ಮರಣ

ಶೃಂಗೇರಿ : ಚಿಕ್ಕಮಗಳೂರು ಜಿಲ್ಲೆಯ ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ಶುಕ್ರವಾರ ಮುಂಜಾನೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ಇಬ್ಬರು ರೈತರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ತಾಲೂಕಿನ ಕೆರೆಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಡುಬಾ ಎಲ್ಸಾರ ಸಮೀಪ ಈ ಘಟನೆ ನಡೆದಿದೆ.

ಮೃತರನ್ನು ಹರೀಶ್ ಮತ್ತು ಉಮೇಶ್ ಎಂದು ಗುರುತಿಸಲಾಗಿದೆ. ಇಬ್ಬರು ಹಸುವಿನ ಕೊಟ್ಟಿಗೆಗೆ ಸೊಪ್ಪು ತರುವುದಕ್ಕಾಗಿ ಸಮೀಪದ ಅರಣ್ಯ ಪ್ರದೇಶಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಏಕಾಏಕಿ ಎದುರಾದ ಕಾಡಾನೆ, ಇಬ್ಬರ ಮೇಲೂ ದಾಳಿ ನಡೆಸಿ ಅವರನ್ನು ಕೊಂದುಹಾಕಿದೆ ಎಂದು ತಿಳಿದುಬಂದಿದೆ.

ಈ ಘಟನೆಯಿಂದಾಗಿ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>