ಸಾಗರ ; ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಐವರು ಗಾಯಗೊಂಡ ಘಟನೆ ತಾಲೂಕಿನ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಭೈರಾಪುರ ಗ್ರಾಮದ ಬಳಿ ತಡರಾತ್ರಿ ನಡೆದಿದೆ.
ಮೃತರನ್ನು ಫರ್ಹನ್ನಿಸಾ (34), ಅಬ್ದುಲ್ ರಝೂ(23) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಸೈಯದ್ ಸಲೀಂ, ಝೋಯಾ ಶೇಕ್, ಬುಶ್ರಾ ಫಾತಿಮಾ ಶೇಕ್ ಮತ್ತು ಬೀಬಿ ಆಯಿಶ ಹಾಗೂ ಟಿಪ್ಪರ್ ಚಾಲಕ ಅನಿಲ್ ಎಂಬುವರು ಗಾಯಗೊಂಡಿದ್ದಾರೆ. ಗಾಯಾಗಳುಗಳನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರಿನಲ್ಲಿದ್ದವರು ಗೋವಾದಿಂದ ಶಿಕಾರಿಪುರದ ಹಿತ್ತಲ ಗ್ರಾಮಕ್ಕೆ ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಶಿಕಾರಿಪುರದಿಂದ ಆನಂದಪುರ ಕಡೆ ಬರುತ್ತಿದ್ದ ಜಲ್ಲಿ ತುಂಬಿದ ಟಿಪ್ಪರ್ ಲಾರಿ ಕಾರಿಗೆ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.

ಈ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.