Accident ಶಿವಮೊಗ್ಗ

ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತ ; ಇಬ್ಬರು ಸ್ಥಳದಲ್ಲೇ ಸಾವು, ಐವರಿಗೆ ಗಾಯ

ಸಾಗರ ; ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಐವರು ಗಾಯಗೊಂಡ ಘಟನೆ ತಾಲೂಕಿನ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಭೈರಾಪುರ ಗ್ರಾಮದ ಬಳಿ ತಡರಾತ್ರಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಮೃತರನ್ನು ಫರ್ಹನ್ನಿಸಾ (34), ಅಬ್ದುಲ್ ರಝೂ(23) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಸೈಯದ್ ಸಲೀಂ, ಝೋಯಾ ಶೇಕ್, ಬುಶ್ರಾ ಫಾತಿಮಾ ಶೇಕ್ ಮತ್ತು ಬೀಬಿ ಆಯಿಶ ಹಾಗೂ ಟಿಪ್ಪರ್ ಚಾಲಕ ಅನಿಲ್ ಎಂಬುವರು ಗಾಯಗೊಂಡಿದ್ದಾರೆ. ಗಾಯಾಗಳುಗಳನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರಿನಲ್ಲಿದ್ದವರು ಗೋವಾದಿಂದ ಶಿಕಾರಿಪುರದ ಹಿತ್ತಲ ಗ್ರಾಮಕ್ಕೆ ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಶಿಕಾರಿಪುರದಿಂದ ಆನಂದಪುರ ಕಡೆ ಬರುತ್ತಿದ್ದ ಜಲ್ಲಿ ತುಂಬಿದ ಟಿಪ್ಪರ್ ಲಾರಿ ಕಾರಿಗೆ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.

ಈ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment