ಹೊಸನಗರ

ಬಗೆಹರಿಯದ ಮೊಬೈಲ್ ನೆಟ್‌ವರ್ಕ್ ಸಮಸ್ಯೆ ; ಏ. 17 ರಂದು ವಾರಂಬಳ್ಳಿಯಿಂದ ಹೊಸನಗರವರೆಗೆ 10 ಕಿ.ಮೀ. ಪಾದಯಾತ್ರೆ

ಹೊಸನಗರ ; ರಾಜ್ಯದಲ್ಲಿಯೇ ಮೊದಲು ಮೊಬೈಲ್ ನೆಟ್‌ವರ್ಕ್ ಹೋರಾಟ ಆರಂಭವಾಗಿದ್ದು ನಮ್ಮ ವಾರಂಬಳ್ಳಿಯಿಂದ. ಈ ಹೋರಾಟಕ್ಕೆ 8 ವರ್ಷ ಆದರೂ ನಮ್ಮೂರ ನೆಟ್‌ವರ್ಕ್ ಸಮಸ್ಯೆ ಬಗೆಹರಿದಿಲ್ಲ ಎಂದು ಮೊಬೈಲ್ ನೆಟ್‌ವರ್ಕ್ ಹೋರಾಟ ಸಮಿತಿ ಅಧ್ಯಕ್ಷ ಮೇಲನೂರು ಶ್ರೀನಿವಾಸ್ ಹೇಳಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಸೊನಲೆ ಗ್ರಾ.ಪಂ ವ್ಯಾಪ್ತಿಯ ವಾರಂಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರತಿ ಸಾರಿಯೂ ರಾಜಕಾರಣಿಗಳು ಟವರ್ ನಿರ್ಮಿಸುವ ಆಶ್ವಾಸನೆ ನೀಡಿ ತೆರಳುತ್ತಾರೆ. ಆದರೆ, ಇನ್ನು ಸಮಸ್ಯೆ ಬಗೆಹರಿದಿಲ್ಲ. ಹೀಗಾಗಿ ಏಪ್ರಿಲ್ 17ಕ್ಕೆ ವಾರಂಬಳ್ಳಿಯಿಂದ ಹೊಸನಗರ ತಾಲ್ಲೂಕು ಕಚೇರಿವರೆಗೆ 10 ಕಿ.ಮೀ ವರೆಗೆ ಬೃಹತ್ ಪಾದಯಾತ್ರೆ ಮತ್ತು ಏಪ್ರಿಲ್ 28 ಕ್ಕೆ ಒಂದನೇ ತರಗತಿಯಿಂದ 10ನೇ ತರಗತಿಯ ವಿದ್ಯಾರ್ಥಿಗಳಿಂದ ಸಂಸದರ ಮನೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದ ಅವರು, ನಮಗೂ ಹೋರಾಟ ಮಾಡಿ ಸಾಕಾಗಿದೆ. ಹೀಗಾಗಿ ಬೃಹತ್ ಪಾದಯಾತ್ರೆಯ ನಿರ್ಣಯ ಮಾಡಲಾಗಿದೆ ಎಂದರು.

ಸಮಿತಿಯ ಕಾರ್ಯದರ್ಶಿ ಹರೀಶ್ ವಿ.ಟಿ. ನಾಯ್ಕ ಮಾತನಾಡಿ, ನೆಟ್‌ವರ್ಕ್ ಸಮಸ್ಯೆಯಿಂದ ಈಗಾಗಲೇ ಹಲವಾರು ಸಾವು-ನೋವುಗಳು ನಮ್ಮೂರಲ್ಲಿ ಕಂಡಿವೆ. ಎಷ್ಟೋ ಹೆಣ್ಣು ಮಕ್ಕಳು ಕೆಲಸ ಮಾಡಲು ನೆಟ್‌ವರ್ಕ್ ಇರೋ ಗುಡ್ಡದ ಮೇಲೆ ಹೋಗಿ ಕುಳಿತಿದ್ದಾರೆ. ಆ ಹೆಣ್ಣು ಮಕ್ಕಳಿಗೆ ರಕ್ಷಣೆ ಯಾರು ಕೊಡುತ್ತಾರೆ? ಪ್ರತಿ ಸಲ ಚುನಾವಣೆ ಬಂದಾಗಲೂ ಸುಳ್ಳು ಆಶ್ವಾಸನೆ ನೀಡಿ ತೆರಳುತ್ತಾರೆ ಹೀಗಾಗಿ ಈ ಹೋರಾಟ ಅನಿವಾರ್ಯ ಎಂದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಪ್ರಧಾನಿಯ ಪತ್ರಕ್ಕೂ ಕಿಮ್ಮತ್ತಿಲ್ಲ !
ಅಧಿಕಾರಿಗಳಿಗೆ ಕೇಳಿದರೆ ಹಾರಿಕೆಯ ಉತ್ತರ ನೀಡುತ್ತಾರೆ. ಸಂಬಂಧಪಟ್ಟ ಇಲಾಖೆಗೆ ಇದುವರೆಗೂ ಸುಮಾರು 15 ಬಾರಿ ಪಾತ್ರ ಬರೆದರೂ ನಮ್ಮ ಸಮಸ್ಯೆ ಬಗೆಹರಿದಿಲ್ಲ. ನಮ್ಮೂರ ಹೋರಾಟಕ್ಕೆ 8 ವರ್ಷ ಆಗಿದೆ. ಆದರೂ ಯಾವ ಅಧಿಕಾರಿಗಳು ನಮ್ಮತ್ತ ಸುಳಿಯುತ್ತಿಲ್ಲ. ಮೊಬೈಲ್ ನೆಟ್‌ವರ್ಕ್ ಹೋರಾಟಕ್ಕೆ ಸಂಬಂಧಿಸಿದಂತೆ ಏ.17ಕ್ಕೆ ವಾರಂಬಳ್ಳಿಯಿಂದ ಹೊಸನಗರ ತಾಲ್ಲೂಕು ಕಚೇರಿಯವರೆಗೂ ಬೃಹತ್ ಪಾದಯಾತ್ರೆ ಮತ್ತು ಏ. 28 ರಂದು ವಾರಂಬಳ್ಳಿ ಮತ್ತು ಸುತ್ತಮುತ್ತಲಿನ ಮಕ್ಕಳಿಂದ ಸಂಸದರ ಮನೆಗೆ ಬೃಹತ್ ಪಾದಯಾತ್ರೆ ಮಾಡಲಾಗುವುದು.
– ವಿನಾಯಕ ಪ್ರಭು ವಾರಂಬಳ್ಳಿ, ಸಮಿತಿ ಕಾರ್ಯದರ್ಶಿ

ಸಮಿತಿಯ ಉಪಾಧ್ಯಕ್ಷ ಪ್ರಕಾಶ್ ಗೊರದಳ್ಳಿ, ಸತೀಶ್ ಕೊಳಗಿ, ಸದಸ್ಯರುಗಳಾದ ಮಂಜುನಾಥ್, ನವೀನ್, ರಮೇಶ್, ಯೋಗೇಂದ್ರ, ಶಂಕರಪ್ಪ ಗೌಡ, ಸತೀಶ್ ಮತ್ತಿತರರು ಉಪಸ್ಥಿತರಿದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>