Hosanagara

ಹೊಂಬುಜದಲ್ಲಿ ವರಮಹಾಲಕ್ಷ್ಮೀ ಪೂಜೆ | ತ್ರಿಕರಣಪೂರ್ವಕ ಧಾರ್ಮಿಕ ಶ್ರದ್ಧೆಯಿಂದ ಜೀವನ ಪಾವನ ; ಶ್ರೀಗಳು

InShot 20260821 202131072

ಹೊಸನಗರ : ‘ಅಷ್ಟವಿಧ ಪೂಜಾ ವಿಧಾನದಿಂದ ಧಾರ್ಮಿಕ ಪರಿಸರ ನಿರ್ಮಾಣಗೊಳ್ಳುವುದು. ಸದಾ ತ್ರಿಕರಣಪೂರ್ವಕ ಧಾರ್ಮಿಕ ಶ್ರದ್ಧೆ-ಭಕ್ತಿಯಿಂದ ಪ್ರತಿಯೋರ್ವರ ಜೀವನವೂ ಪಾವನಗೊಳ್ಳುವುದು’ ಎಂದು ಹೊಂಬುಜ ಅತಿಶಯ ಶ್ರೀಕ್ಷೇತ್ರದ ಶ್ರೀ ಜೈನ ಮಠದ ಪೀಠಾಧೀಶ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ ಶ್ರಾವಣ ಮಾಸದ 2ನೇ ಸಂಪತ್ ಶುಕ್ರವಾರದಂದು ಶ್ರೀ 1008 ಪಾರ್ಶ್ವನಾಥ ಸ್ವಾಮಿ ಹಾಗೂ ಅಭೀಷ್ಠವರಪ್ರದಾಯಿನಿ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ನೆರವೇರಿದ ಆಗಮೋಕ್ತ ಪೂಜಾ ವಿಧಿ-ವಿಧಾನದ ಬಳಿಕ ಮಂಗಲ ಪ್ರವಚನದಲ್ಲಿ ತಿಳಿಸಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಇದೇ ಸಂದರ್ಭದಲ್ಲಿ ವರೂರು ಜೈನ ಕ್ಷೇತ್ರದ ಪರಮಪೂಜ್ಯ ಸ್ವಸ್ತಿಶ್ರೀ ಧರ್ಮಸೇನ ಭಟ್ಟಾರಕ ಮಹಾಸ್ವಾಮೀಜಿಗಳವರು ಉಪಸ್ಥಿತರಿದ್ದರು.

ಶ್ರೀ ವರಮಹಾಲಕ್ಷ್ಮೀ ಪೂಜೆಯಲ್ಲಿ ಊರ ಪರವೂರ ಭಕ್ತರು ಉಡಿ-ಸೀರೆ-ಹರಕೆ-ಕಾಣಿಕೆ ಸಮರ್ಪಿಸಿ, ಇಷ್ಟಾರ್ಥ ನೆರವೇರಲು ಪ್ರಾರ್ಥಿಸಿದರು. ವಿವಿಧ ಹೂವು, ಹಣ್ಣು, ಸವಿ ನೈವೇದ್ಯಗಳನ್ನು ಅರ್ಪಿಸಲಾಯಿತು. ಶ್ರೀಗಳವರು ಶ್ರೀಫಲ ಮಂತ್ರಾಕ್ಷತೆ ನೀಡಿ, ಆಶೀರ್ವದಿಸಿದರು.

ಶ್ರೀ ನೇಮಿನಾಥ ಸ್ವಾಮಿ, ಶ್ರೀ ಮಹಾವೀರ ಸ್ವಾಮಿ, ಶ್ರೀ ಆದಿನಾಥ ಸ್ವಾಮಿ, ಶ್ರೀ ಕೂಷ್ಮಾಂಡಿನಿ ದೇವಿ, ಶ್ರೀ ಸರಸ್ವತಿ ದೇವಿ, ಶ್ರೀ ಕ್ಷೇತ್ರಪಾಲ, ಶ್ರೀ ನಾಗಸನ್ನಿಧಿಯಲ್ಲಿ ಪೂರ್ವಪರಂಪರೆಯಂತೆ ಪೂಜೆಗಳನ್ನು ಶ್ರೀಗಳವರ ದಿವ್ಯ ಸಾನಿಧ್ಯದಲ್ಲಿ ನೆರವೇರಿಸಲಾಯಿತು.

ಪೂಜಾ ಮತ್ತು ಆಹಾರದಾನದ ಸೇವಾಕರ್ತರಾಗಿ ಅಭಿನಂದನ್ ಪಾಟೀಲ್, ಉತ್ತಮ್ ಪಾಟೀಲ್ ಅರಿಹಂತ ಪರಿವಾರ, ಬೋರವಾಂವ್ ಉಪಸ್ಥಿತರಿದ್ದರು.

ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ವಿಜಯಕುಮಾರ್ ಪಾಟೀಲ್ ಮತ್ತಿತರ ಗಣ್ಯರು ದರ್ಶನ ಪಡೆದರು.

ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಕಾಶ ನೇ. ಮಗದುಮ್ಮ ಹಾಗೂ ಆಡಳಿತಾಧಿಕಾರಿ ಸಿ.ಡಿ. ಅಶೋಕ ಕುಮಾರ್‌ ಸರ್ವರನ್ನು ಸ್ವಾಗತಿಸಿದರು.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>