ರಿಪ್ಪನ್ಪೇಟೆ ; ಅಮೇರಿಕಾ ದೇಶದ ಚಿಕಾಗೋನಲ್ಲಿ ಏರ್ಪಡಿಸಿರುವ ವಿಶ್ವ ಜೈನಧರ್ಮ ಸಮ್ಮೇಳನದಲ್ಲಿ ಹೊಂಬುಜ ಜೈನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರು ವಿಶೇಷ ಆಹ್ವಾನಿತರಾಗಿ ಭಾಗವಹಿಸಲು ತೆರಳಿದ್ದಾರೆ.

ಜುಲೈ 3 ರಿಂದ 6ರವರೆಗೆ ನಡೆಯಲಿರುವ ಧರ್ಮಸಭೆಯಲ್ಲಿ ಜೈನ ಧರ್ಮ ಸಿದ್ಧಾಂತ, ವಿಶ್ವ ಧರ್ಮ ಸಮನ್ವಯತೆ, ವಿಶ್ವ ಶಾಂತಿ, ಸ್ವಚ್ಛ ಪರಿಸರ ರಕ್ಷಣೆ ಕುರಿತು ವಿಶೇಷ ಪ್ರವಚನ ನೀಡಲಿದ್ದಾರೆಂದು ಶ್ರೀಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಪ್ರಥಮ ಬಾರಿಗೆ ಪೂಜ್ಯಸ್ವಸ್ತಿಶ್ರೀ ಸ್ವಾಮೀಜಿಯವರು ಚಿಕಾಗೋದಲ್ಲಿ ಜೈನ ಧರ್ಮದ ಸಾರಸತ್ವದ ಮಹತ್ವವನ್ನು ಸಾದರಪಡಿಸಲಿದ್ದಾರೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.