ರಿಪ್ಪನ್ಪೇಟೆ ; ಹಾರನಹಳ್ಳಿ ಶಿವಾನಂದಪ್ಪ (85) ತಮ್ಮ ಸ್ವಗೃಹದಲ್ಲಿ ಭಾನುವಾರ ನಿಧನ ಹೊಂದಿದರು.
ಮೃತರಿಗೆ ಪತ್ನಿ, ಪುತ್ರಿ ಹಾಗೂ ಓರ್ವ ಪುತ್ರ ಇದ್ದಾರೆ. ಕಳೆದ 50 ವರ್ಷಗಳಿಂದ ರಿಪ್ಪನ್ಪೇಟೆಯ ಕರ್ನಾಟಕ ಪ್ರಾಂತೀಯ ಹಿಂದೂ ಮಹಾಸಭಾ ಗಣಪತಿಮೂರ್ತಿ ಸೇರಿದಂತೆ ಇತರ ಗಣಪತಿಗಳನ್ನು ತನ್ನ ಕೈಚಳಕದಲ್ಲಿ ಮಾಡಿ ಮಲೆನಾಡಿನ ವ್ಯಾಪ್ತಿಯಲ್ಲಿ ಗಣಪತಿ ಶಿವಾನಂದಪ್ಪ ಎಂದೇ ಪ್ರಖ್ಯಾತಿಯನ್ನು ಹೊಂದಿದ್ದ ಇವರ ನಿಧನಕ್ಕೆ ಕರ್ನಾಟಕ ಪ್ರಾಂತೀಯ ಹಿಂದೂ ಮಹಾಸಭಾ ಸಮಿತಿಯವರು ಹಾಗೂ ಅಭಿಮಾನಿಗಳು ಮತ್ತು ಶ್ರೀಬಸವೇಶ್ವರು ವೀರಶೈವ ಸಮಾಜದವರು ತೀವ್ರ ಸಂತಾಪ ವ್ಯಕ್ತಪಡಿಸಿ ಭಗವಂತ ಮೃತರ ಕುಟುಂಬಕ್ಕೆ ದುಃಖ ಭರಿಸಿಕೊಳ್ಳುವ ಶಕ್ತಿ ಕರುಣಿಸಲೆಂದು ಪ್ರಾರ್ಥಿಸಿದ್ದಾರೆ.

