ರಿಪ್ಪನ್ಪೇಟೆ ; ಹಾರನಹಳ್ಳಿ ಶಿವಾನಂದಪ್ಪ (85) ತಮ್ಮ ಸ್ವಗೃಹದಲ್ಲಿ ಭಾನುವಾರ ನಿಧನ ಹೊಂದಿದರು.
ಮೃತರಿಗೆ ಪತ್ನಿ, ಪುತ್ರಿ ಹಾಗೂ ಓರ್ವ ಪುತ್ರ ಇದ್ದಾರೆ. ಕಳೆದ 50 ವರ್ಷಗಳಿಂದ ರಿಪ್ಪನ್ಪೇಟೆಯ ಕರ್ನಾಟಕ ಪ್ರಾಂತೀಯ ಹಿಂದೂ ಮಹಾಸಭಾ ಗಣಪತಿಮೂರ್ತಿ ಸೇರಿದಂತೆ ಇತರ ಗಣಪತಿಗಳನ್ನು ತನ್ನ ಕೈಚಳಕದಲ್ಲಿ ಮಾಡಿ ಮಲೆನಾಡಿನ ವ್ಯಾಪ್ತಿಯಲ್ಲಿ ಗಣಪತಿ ಶಿವಾನಂದಪ್ಪ ಎಂದೇ ಪ್ರಖ್ಯಾತಿಯನ್ನು ಹೊಂದಿದ್ದ ಇವರ ನಿಧನಕ್ಕೆ ಕರ್ನಾಟಕ ಪ್ರಾಂತೀಯ ಹಿಂದೂ ಮಹಾಸಭಾ ಸಮಿತಿಯವರು ಹಾಗೂ ಅಭಿಮಾನಿಗಳು ಮತ್ತು ಶ್ರೀಬಸವೇಶ್ವರು ವೀರಶೈವ ಸಮಾಜದವರು ತೀವ್ರ ಸಂತಾಪ ವ್ಯಕ್ತಪಡಿಸಿ ಭಗವಂತ ಮೃತರ ಕುಟುಂಬಕ್ಕೆ ದುಃಖ ಭರಿಸಿಕೊಳ್ಳುವ ಶಕ್ತಿ ಕರುಣಿಸಲೆಂದು ಪ್ರಾರ್ಥಿಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





