ಶಿವಮೊಗ್ಗ: ತ್ಯಾವರೆಕೊಪ್ಪ ಮೃಗಾಲಯದಲ್ಲಿ ವನ್ಯಜೀವಿಗೆ ಚಿಕಿತ್ಸೆ ನೀಡುವ ಸಂದರ್ಭದಲ್ಲಿ ನೀರಾನೆ ದಾಳಿಗೆ ಒಳಗಾಗಿ ಯುವ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಮೃತಪಟ್ಟಿರುವುದು ಅತ್ಯಂತ ದುಃಖಕರ ಸಂಗತಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ಅವರು, ವನ್ಯಜೀವಿಗಳ ಸೇವೆಗೆ ತಮ್ಮ ವೃತ್ತಿ ಬದುಕನ್ನು ಮುಡಿಪಾಗಿಟ್ಟಿದ್ದ ಯುವ ವೈದ್ಯೆಯನ್ನು ಕಳೆದುಕೊಂಡಿರುವುದು ಕೇವಲ ಅವರ ಕುಟುಂಬ ಹಾಗೂ ಇಲಾಖೆಗೆ ಮಾತ್ರವಲ್ಲ, ಇಡೀ ಸಮಾಜಕ್ಕೂ ದೊಡ್ಡ ನಷ್ಟವಾಗಿದೆ ಎಂದು ಹೇಳಿದರು.
ಇಂತಹ ದುಃಖದ ಸಂದರ್ಭದಲ್ಲಿ ಸರ್ಕಾರವು ಮೃತರ ಕುಟುಂಬದೊಂದಿಗೆ ನಿಲ್ಲಲಿದೆ ಎಂದು ಭರವಸೆ ನೀಡಿದ ಅವರು, ಈಗಾಗಲೇ ಅರಣ್ಯ ಸಚಿವರು ಈ ಘಟನೆ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶಿಸಿರುವುದನ್ನು ಉಲ್ಲೇಖಿಸಿದರು.
Malnad Times App ಡೌನ್ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
ಲೇಖನವನ್ನು ಮುಂದುವರಿಸಿ ಓದಿ
“ಡಾ. ಸಮೀಕ್ಷಾ ರೆಡ್ಡಿ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗಕ್ಕೂ, ಸಹೋದ್ಯೋಗಿಗಳಿಗೂ ದೇವರು ನೀಡಲಿ” ಎಂದು ಸಚಿವರು ಪ್ರಾರ್ಥಿಸಿದ್ದಾರೆ.

