Shivamogga

ಅಕ್ರಮ ಮದ್ಯ ಮಾರಾಟ ವಿರೋಧಿಸಿ ಡಿಸಿ ಕಚೇರಿ ಎದುರು ಗ್ರಾಮಸ್ಥರ ಪ್ರತಿಭಟನೆ

ಶಿವಮೊಗ್ಗ ; ನಮ್ಮೂರಿನಲ್ಲಿ ಮದ್ಯ ಮಾರಾಟ ಮಾಡಬಾರದು, ಅಕ್ರಮ ಮದ್ಯವನ್ನು ದಿನಸಿ ಅಂಗಡಿಯಲ್ಲಿ ಇಟ್ಟು ಮಾರಾಟ ಮಾಡುತ್ತಿರುವ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಮದ ಮಹಿಳೆಯರು ಮತ್ತು ಗ್ರಾಮಸ್ಥರು ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಬೆಳ್ಳೂರಿನಲ್ಲಿ ನಾವು ಖಾಯಂ ನಿವಾಸಿಗಳಾಗಿದ್ದು, ಕೃಷಿ ಕೂಲಿ ಕಾರ್ಮಿಕರಾಗಿರುತ್ತೇವೆ. ನಮ್ಮ ಗ್ರಾಮದಲ್ಲಿ ದಿನಸಿ ಅಂಗಡಿಗಳಲ್ಲಿ ಯಾವುದೇ ಪರವಾನಗಿ ಇಲ್ಲದೇ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು, ಮಹಿಳೆಯರಿಗೆ ಮಕ್ಕಳಿಗೆ ಮತ್ತು ಸಾರ್ವಜನಿಕರಿಗೆ ಇದರಿಂದ ಸಾಕಷ್ಟು ತೊಂದರೆಯಾಗುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು.

ಈ ಮದ್ಯವನ್ನು ಸೇವಿಸಿ ಸಾಕಷ್ಟು ಜನರು ಅನಾರೋಗ್ಯಕ್ಕೆ ತುತ್ತಾಗುತ್ತಿರುತ್ತಾರೆ. ಮದ್ಯ ಸೇವಿಸಿದ ವ್ಯಕ್ತಿಗಳು ಬಾಯಿಗೆ ಬಂದಂತೆ ಆಶ್ಲೀಲವಾಗಿ ಮಾತನಾಡುತ್ತಾ ಮಹಿಳೆಯರು ಮತ್ತು ಮಕ್ಕಳಿಗೆ ತೊಂದರೆ ಕೊಡುತ್ತಿರುತ್ತಾರೆ. ಮಹಿಳೆಯರು ಮತ್ತು ಮಕ್ಕಳು ರಸ್ತೆಯಲ್ಲಿ ಓಡಾಡುವುದು ಕಷ್ಟವಾಗಿರುತ್ತದೆ ಎಂದು ತಿಳಿಸಿದರು.

ಆದ್ದರಿಂದ ತಕ್ಷಣವೇ ಅಕ್ರಮ ಮದ್ಯ ಮಾರಾಟಗಾರರ ವಿರುದ್ಧ ಕಾನೂನು ಕ್ರಮ ಜರುಗಿಸಿ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಿ ಗ್ರಾಮದ ಸ್ವಾಸ್ಥ್ಯ ಕಾಪಾಡಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಪ್ರತಿಭಟನೆಗೆ ಶ್ರೀ ಕ್ಷೇತ್ರ ಗುಳುಗುಳಿ ಶಂಕರೇಶ್ವರ ಸೇವಾ ಸವಿತಿ ತನ್ನ ಬೆಂಬಲ ನೀಡಿದೆ.

ಪ್ರತಿಭಟನೆಯಲ್ಲಿ ಪವಿತ್ರ, ದೇವೇಂದ್ರಪ್ಪ, ನಾಗರಾಜ, ಬಾಬಣ್ಣ, ದಿವಾಕರ, ಚಂದ್ರಪ್ಪ, ಶೇಖರಪ್ಪ, ಶರತ್, ಹರೀಶ್, ರಾಜೇಶ, ಶಿವಪ್ಪ, ರಾಘು, ಕೃಷ್ಣಮೂರ್ತಿ, ಮೋಹನ, ಅರಸಾಳು ಗ್ರಾಮಸ್ಥರು ಇದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>