Ripponpete

ನಾವೆಂದಿಗೂ ಯಶಸ್ವಿನ ಬಗ್ಗೆ ಕನಸು ಕಾಣುತ್ತ ಕೂರಬಾರದು ; ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು

ರಿಪ್ಪನ್‌ಪೇಟೆ ; ನಾವೆಂದಿಗೂ ಯಶಸ್ವಿನ ಬಗ್ಗೆ ಕನಸು ಕಾಣುತ್ತ ಕೂರಬಾರದು ಯಶಸ್ಸು ಸಾಧಿಸುವ ಬಗ್ಗೆ ನಿರಂತರ ಕೆಲಸ ಮಾಡುವವರಾಗಬೇಕೆಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.

WhatsApp Group Join Now
Telegram Group Join Now
Instagram Group Join Now

ಮಳವಳ್ಳಿ ಶ್ರೀಮಹಾಲಿಂಗೇಶ್ವರ ಮತ್ತು ಬಸವಣ್ಣ ದೇವಸ್ಥಾನಲ್ಲಿ  ಶ್ರೀಮಾಲಿಂಗೇಶ್ವರ ಮತ್ತು ಬಸವಣ್ಣ ದೇವರುಗಳ ಪ್ರತಿಷ್ಠಾ  ವರ್ಧಂತಿ ಮಹೋತ್ಸವದ ಅಂಗವಾಗಿ  ಕಲಾಹೋಮ ಮತ್ತು ರುದ್ರಾಭಿಷೇಕ ಧಾರ್ಮಿಕ ಕಾರ್ಯಕ್ರಮ ಮತ್ತು ಧರ್ಮ ಸಭೆಯ ದಿವ್ಯ ಸಾನಿದ್ಯ ವಹಿಸಿ ಆಶೀರ್ವಚನ ನೀಡಿ, ಎಲ್ಲರೂ ಜಗತ್ತೇ ಬದಲಾಗಿದೆ ಎಂದು ಹೇಳುತ್ತಾರೆ. ಆದರೆ ಯೋಚಿಸಿ ಮೆಣಸಿನ ಖಾರ ಬದಲಾಗಿಲ್ಲ, ಮಾವಿನಹಣ್ಣಿನ ಸಿಹಿ ಬದಲಾಗಿಲ್ಲ, ಎಲೆಗಳ ಹಸಿರು ಬಣ್ಣ ಬದಲಾಗಿಲ್ಲ, ಬದಲಾಗಿದ್ದು ಮನುಷ್ಯರ ಮಾನವೀಯತೆ ಹಾಗಾಗಿ ಗುರು-ಹಿರಿಯರಿಗೆ ಗೌರವಿಸಿ ಆದರಣೀಯ ಬದುಕನ್ನು ಸಾಗಿಸುವುದೇ ನಿಜವಾದ ಜೀವ ಆದ್ದರಿಂದ ಮಾನವೀಯ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಬರಬೇಕೆಂದರು.

ಶ್ರೀಮಹಾಲಿಂಗೇಶ್ವರ ಮತ್ತು ಬಸವಣ್ಣ ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷ ನಾಗರಾಜ್‌ಗೌಡ, ಗೌರವಾಧ್ಯಕ್ಷ ಚನ್ನಪ್ಪಗೌಡ, ಗ್ರಾಮ ಪಂಚಾಯಿತ್ ಸದಸ್ಯ ಚಂದ್ರಶೇಖರ ಮಳವಳ್ಳಿ, ಮಳವಳ್ಳಿ ಗ್ರಾಮಸ್ಥರು ಹಾಜರಿದ್ದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಚಂದ್ರಶೇಖರ ಸ್ವಾಗತಿಸಿ, ನಿರೂಪಿಸಿ ವಂದಿಸಿದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]