Tharikere | ಪ್ರವಾಸಕ್ಕೆ ಬಂದ ವೇಳೆ ಹೆಬ್ಬೆ ಜಲಪಾತದ (Hebbe WaterFalls) ಬಳಿ ಇದ್ದ ಅಪಾಯಕಾರಿ ಬಂಡೆಯೊಂದರ ಮೇಲೆ ನಿಂತು ಸೆಲ್ಫಿ (Selfie) ತೆಗೆದುಕೊಳ್ಳುವಾಗ ಹೈದರಾಬಾದ್ (Hyderabad) ಮೂಲದ ಯುವಕನೊಬ್ಬ ಕಾಲುಜಾರಿ ಕಂದಕಕ್ಕೆ ಬಿದ್ದು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ತರೀಕೆರೆ ತಾಲೂಕಿನ ಹೆಬ್ಬೆ ಫಾಲ್ಸ್ ಬಳಿ ಸೋಮವಾರ ನಡೆದಿದೆ.
Read More:Shivamogga Rain | ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಎಲ್ಲೆಲ್ಲಿ ಎಷ್ಟು ಮಿ.ಮೀ. ಮಳೆಯಾಗಿದೆ ?

ಹೈದರಾಬಾದ್ ಮೂಲದ ಶ್ರವಣ್ (25) ಮೃತ ದುರ್ಧೈವಿ. ಶ್ರವಣ್ ಸ್ನೇಹಿತರೊಂದಿಗೆ ಹೈದರಾಬಾದ್ ನಿಂದ ಕಾಫಿನಾಡಿನ ಪ್ರವಾಸ ಕೈಗೊಂಡಿದ್ದರು. ಸೋಮವಾರ ಬೆಳಿಗ್ಗೆ ಬೈಕ್ನಲ್ಲಿ ಹೆಬ್ಬೆ ಫಾಲ್ಸ್ ಗೆ ತೆರಳಿದ್ದರು. ಹೆಬ್ಬೆ ಫಾಲ್ಸ್ ನಲ್ಲಿ ಅಪಾಯಕಾರಿ ಬಂಡೆ ಮೇಲೆ ನಿಂತು ಸೆಲ್ಫಿ ತೆಗೆಯುವ ವೇಳೆಯಲ್ಲಿ ಕಾಲು ಜಾರಿ ಬಿದ್ದಿದ್ದಾನೆ. ಬಿದ್ದ ರಭಸಕ್ಕೆ ಯುವಕನ ತಲೆಗೆ ಬಂಡೆ ಕಲ್ಲು ಬಡಿದು ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Read More:ನಾನು ಸೋತಿರಬಹುದು ಆದರೆ ಶಿವಮೊಗ್ಗ ಬಿಟ್ಟು ಹೋಗಲ್ಲ ; ಗೀತಾ ಶಿವರಾಜ್ಕುಮಾರ್

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.