CHIKKAMAGALURU | ಆಹಾರ ಅರಸಿ ಬಂದಿದ್ದ ಕಾಡಾನೆಯೊಂದು ತೋಟದ ಬೇಲಿಗೆ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿಯ ಸ್ಪರ್ಶಿಸಿ ಸಾವನ್ನಪ್ಪಿದ ಘಟನೆ ತಾಲೂಕಿನ ಕೊಳಗಾಮೆ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ.
ಕೊಳಗಾಮೆ ಗ್ರಾಮದಲ್ಲಿರುವ ಆಶ್ರಯ ಕಾಫಿ ಎಸ್ಟೇಟ್ ಬಳಿ ಸೋಮವಾರ ಮಧ್ಯರಾತ್ರಿ ಆಹಾರ ಅರಸಿ ಕಾಡಾನೆಯೊಂದ ಬಂದಿದೆ. ತೋಟಕ್ಕೆ ನುಗ್ಗಲು ಯತ್ನಿಸಿದ್ದ ವೇಳೆ ಕಾಫಿ ತೋಟಕ್ಕೆ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಪ್ರಾಣ ಬಿಟ್ಟಿದೆ ಎಂದು ತಿಳಿದು ಬಂದಿದೆ.
ಘಟನೆ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಮೃತ ಕಾಡಾನೆಯ ಕಳೇಬರದ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.
ತೋಟದ ಬೇಲಿಗೆ ಅಕ್ರಮವಾಗಿ ವಿದ್ಯುತ್ ಬೇಲಿ ಹಾಕಿ ಕಾಡಾನೆ ಸಾವಿಗೆ ಕಾರಣರಾದ ಎಸ್ಟೇಟ್ ಮಾಲಿಕರ ವಿರುದ್ಧ ದೂರು ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಆನೆಗೆ 35 ವರ್ಷ ವಯಸ್ಸಿರಬಹುದು. ಮುತ್ತೋಡಿ ಭದ್ರಾ ಅಭಯಾರಣ್ಯದಿಂದ ಆಹಾರ ಹುಡುಕಿಕೊಂಡು ಬಂದಾಗ ಈ ಅವಘಡ ಸಂಭವಿಸಿದೆ.
– ರಮೇಶ್ ಬಾಬು, ಉಪ ಅರಣ್ಯ ಸಂರಕ್ಷಣಾಧಿಕಾರಿ

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.