ತರೀಕೆರೆ ; ವಿದ್ಯುತ್ ತಂತಿ ತಗುಲಿ ಬೃಹತ್ ಕಾಡಾನೆಯೊಂದು ಸಾವನ್ನಪ್ಪಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕೆಮ್ಮಣ್ಣುಗುಂಡಿ ಸಮೀಪದ ಲಾಲ್ಬಾಗ್ ರಸ್ತೆಯಲ್ಲಿ ನಡೆದಿದೆ.
ತಣಿಗೇಬೈಲು ಅರಣ್ಯ ವ್ಯಾಪ್ತಿಯ ಲಾಲ್ ಬಾಗ್ ರಸ್ತೆಯಲ್ಲಿ ಹಲಸಿನಕಾಯಿ ತಿನ್ನಲು ಹೋಗಿ ಅಂದಾಜು 35 ವರ್ಷದ ಬೃಹತ್ ಕಾಡಾನೆ ವಿದ್ಯುತ್ ಶಾಕ್ ಗೆ ಬಲಿಯಾಗಿದೆ.
ಕಾಫಿನಾಡಲ್ಲಿ ಆಗಾಗ್ಗೆ ಕಾಡಾನೆ ದಾಳಿಗೆ ಜನರು ಸಾವನ್ನಪ್ಪುತ್ತಿದ್ದರೆ, ಇನ್ನೊಂದೆಡೆ ಬಂಡೆ ಮಧ್ಯೆ ಸಿಲುಕಿ, ಆಹಾರವಿಲ್ಲದೆ, ವಿದ್ಯುತ್ ಶಾಕ್ ನಿಂದ ಕಾಡಾನೆಗಳು ಸಾಯುತ್ತಿವೆ. ಯುಗಾದಿಯಂದೇ ಆನೆ ದಾಳಿಗೆ ರೈತ ಸಾವನ್ನಪ್ಪಿದ್ದ ಘಟನೆಯೂ ನಡೆದಿತ್ತು.
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.