ನಾಲ್ಕೈದು ಕಾಡುಕೋಣಗಳ ಕಳೇಬರ ಪತ್ತೆ ! ದುಷ್ಕರ್ಮಿಗಳು ಬೇಟೆಯಾಡಿರುವ ಶಂಕೆ

Written by Mahesh Hindlemane

Published on:

Ripponpete | ಅರಣ್ಯ (Forest) ಪ್ರದೇಶದಲ್ಲಿ ನಾಲ್ಕೈದು ಕಾಡುಕೋಣಗಳ (Bison) ಕಳೇಬರ ಪತ್ತೆಯಾಗಿದ್ದು ದುಷ್ಕರ್ಮಿಗಳು (Hunters Arrest) ಬೇಟೆಯಾಡಿರುವ ಶಂಕೆ ವ್ಯಕ್ತವಾಗಿದೆ.

WhatsApp Group Join Now
Telegram Group Join Now
Instagram Group Join Now

ಶಿವಮೊಗ್ಗ (Shivamogga) ಜಿಲ್ಲೆಯ ಹೊಸನಗರ (Hosanagara) ತಾಲೂಕಿನ ಹುಂಚ ಸಮೀಪದ ನಾಗರಹಳ್ಳಿ ಗ್ರಾಮದಲ್ಲಿ ಅಕ್ರಮ ಬಂದೂಕು ಬಳಸಿ ಕಾಡುಕೋಣಗಳ ಹತ್ಯೆ ಮಾಡಿರುವುದಾಗಿ ತಿಳಿದುಬಂದಿದೆ.

ಪತ್ತೆಯಾದ ಕಾಡುಕೋಣಗಳ ಕಳೇಬರ

ನಾಲ್ಕೈದು ಕಾಡುಕೋಣಗಳ ಕಳೇಬರ ಪತ್ತೆಯಾಗಿದ್ದು, ಸ್ಥಳಕ್ಕೆ ಸಾಗರ ಡಿಎಫ್‌ಓ ಸಂತೋಷ್ ಕೆಂಚಣ್ಣನವರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಪರೀಕ್ಷೆಗಾಗಿ ಕಾಡುಕೋಣಗಳ ಕಳೇಬರಗಳನ್ನು ಲ್ಯಾಬ್‌ಗೆ ಕಳುಹಿಸಲಾಗಿದೆ.

ಆರೋಪಿಗಳು ಕಾಡುಕೋಣಗಳ ಮಾಂಸಕಾಗಿ ಬೇಟೆಯಾಡಿರುವ ಸಾಧ್ಯತೆ ಇದ್ದು, ಸದ್ಯ ಅರಣ್ಯಾಧಿಕಾರಿಗಳು ಕಾಡುಕೋಣಗಳ ಹತ್ಯೆ ಬಗ್ಗೆ ತನಿಖೆ ಕೈಗೊಂಡಿದ್ದಾರೆ.

Read more:ಎಂ.ಬಿ.ಭಾನುಪ್ರಕಾಶ್ ನಿಧನಕ್ಕೆ ವಿಜಯೇಂದ್ರ ಸಂತಾಪ

Author Profile

Mahesh Hindlemane
Mahesh Hindlemane
ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.

Leave a Comment