Chikkamagaluru

ಸಿಡಿಲು ಬಡಿದು ಮಹಿಳೆ ಸಾವು !

ಚಿಕ್ಕಮಗಳೂರು ; ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿದ ಘಟನೆ ತಾಲೂಕಿನ ಕುರುಬರಹಳ್ಳಿಯಲ್ಲಿ ಭಾನುವಾರ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ನಾಗಮ್ಮ (65) ಸಿಡಿಲಿಗೆ ಬಲಿಯಾದ ಮಹಿಳೆ. ಬೇಲೂರು ಮೂಲದ ನಾಗಮ್ಮ ಮಗಳ ಮನೆಯಲ್ಲಿ ಶುಂಠಿ ನಾಟಿ ಮಾಡಲು ಬಂದಿದ್ದ ವೇಳೆ ಸಿಡಿಲು ಬಡಿದು ನಾಗಮ್ಮ ಸಾವನ್ನಪ್ಪಿದ್ದಾರೆ.

ಶುಂಠಿ ನಾಟಿ ಮಾಡುವ ಕೆಲಸ ಇದ್ದಿದ್ದರಿಂದ ನಾಗಮ್ಮ ದಂಪತಿಗಳನ್ನು ಅಳಿಯನೇ ಹೋಗಿ ಕರೆದುಕೊಂಡು ಬಂದಿದ್ದರು. ಮಧ್ಯಾಹ್ನ ಮಳೆ ಬರುತ್ತಿದ್ದ ಸಂದರ್ಭ ಹೊಲದಲ್ಲಿ 12 ಮಂದಿ ಕೆಲಸ ಮಾಡುತ್ತಿದ್ದರು. ಈ ವೇಳೆ ನಾಗಮ್ಮ ಅವರಿಗೆ ಸಿಡಿಲು ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಲೇಖನವನ್ನು ಮುಂದುವರಿಸಿ ಓದಿ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುರಿದ ಮೊದಲ ಮಳೆ ಮಹಿಳೆಯನ್ನು ಬಲಿ ಪಡೆದುಕೊಂಡಂತಾಗಿದೆ.

ಇನ್ನೂ ಚಿಕ್ಕಮಗಳೂರು ನಗರ ಮತ್ತು ಸುತ್ತಮುತ್ತ ಭಾನುವಾರ ಮಧ್ಯಾಹ್ನವೇ ಒಂದು ಗಂಟೆಗೂ ಹೆಚ್ಚು ಕಾಲ ಭರ್ಜರಿ ಮಳೆ ಸುರಿದು ತಂಪೆರೆಯಿತು.

ಮಧ್ಯಾಹ್ನ 1.30ರ ವೇಳೆಗೆ ಆರಂಭವಾದ ಮಳೆ, ಒಂದು ಗಂಟೆಗೂ ಹೆಚ್ಚು ಕಾಲ ಸುರಿಯಿತು. ಬಿರುಗಾಳಿ ಸಹಿತ ಸುರಿದ ಮಳೆಯಿಂದ ಮರದ ಕೊಂಬೆಗಳು ಕೆಲವೆಡೆ ಮುರಿದು ಬಿದ್ದವು.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>