ಎನ್.ಆರ್.ಪುರ ; ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಮೃ*ತಪಟ್ಟ ಘಟನೆ ಬುಧವಾರ ರಾತ್ರಿ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬನ್ನೂರು ಬಳಿ ನಡೆದಿದೆ.
ದಾವಣಗೆರೆ ಜಿಲ್ಲೆ ಹೊನ್ನಾಳಿ ಮೂಲದ ಅನಿತಾ (25) ಮೃತ ಮಹಿಳೆ. ಅನಿತಾ ಕಾಫಿತೋಟದಲ್ಲಿ ಕೆಲಸ ಮಾಡಿಕೊಂಡು, ಲೈನ್ ಮನೆಯಲ್ಲಿ ವಾಸ ಮಾಡುತ್ತಿದ್ದರು. ಬುಧವಾರ ರಾತ್ರಿ ಸುಮಾರು 9 ಗಂಟೆಗೆ ಮನೆಗೆ ಹೋಗುವಾಗ ಕಾಡಾನೆ ದಾಳಿ ಮಾಡಿದೆ.

ಬಾಳೆಹೊನ್ನೂರು ಆಸ್ಪತ್ರೆಯಲ್ಲಿ ಅನಿತಾ ಅವರಿಗೆ ಚಿಕಿತ್ಸೆ ಕೊಡಿಸಿ, ಬಳಿಕ ಶಿವಮೊಗ್ಗಕ್ಕೆ ರವಾನಿಸಲಾಗುತ್ತಿತ್ತು. ಆದರೆ ಶಿವಮೊಗ್ಗ ಹೋಗುವಾಗ ಮಾರ್ಗ ಮಧ್ಯೆ ಅನಿತಾ ಮೃ*ತಪಟ್ಟಿದ್ದಾರೆ.
ಘಟನೆ ಸಂಬಂಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

