Chikmagaluru News

ಕಾಡಾನೆ ದಾಳಿಗೆ ಮಹಿಳೆ ಬ*ಲಿ !

ಎನ್.ಆರ್.ಪುರ ; ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಮೃ*ತಪಟ್ಟ ಘಟನೆ ಬುಧವಾರ ರಾತ್ರಿ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬನ್ನೂರು ಬಳಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ದಾವಣಗೆರೆ ಜಿಲ್ಲೆ ಹೊನ್ನಾಳಿ ಮೂಲದ ಅನಿತಾ (25) ಮೃತ ಮಹಿಳೆ. ಅನಿತಾ ಕಾಫಿತೋಟದಲ್ಲಿ ಕೆಲಸ ಮಾಡಿಕೊಂಡು, ಲೈನ್ ಮನೆಯಲ್ಲಿ ವಾಸ ಮಾಡುತ್ತಿದ್ದರು. ಬುಧವಾರ ರಾತ್ರಿ ಸುಮಾರು 9 ಗಂಟೆಗೆ ಮನೆಗೆ ಹೋಗುವಾಗ ಕಾಡಾನೆ ದಾಳಿ ಮಾಡಿದೆ.

ಬಾಳೆಹೊನ್ನೂರು ಆಸ್ಪತ್ರೆಯಲ್ಲಿ ಅನಿತಾ ಅವರಿಗೆ ಚಿಕಿತ್ಸೆ ಕೊಡಿಸಿ, ಬಳಿಕ ಶಿವಮೊಗ್ಗಕ್ಕೆ ರವಾನಿಸಲಾಗುತ್ತಿತ್ತು. ಆದರೆ ಶಿವಮೊಗ್ಗ ಹೋಗುವಾಗ ಮಾರ್ಗ ಮಧ್ಯೆ ಅನಿತಾ ಮೃ*ತಪಟ್ಟಿದ್ದಾರೆ.

ಘಟನೆ ಸಂಬಂಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>