ಹೊಸನಗರ ; ಪಟ್ಟಣದ ಕುವೆಂಪು ವಿದ್ಯಾಸಂಸ್ಥೆಯ ಮುಖ್ಯಸ್ಥ, ನಗರ ಪದವಿಪೂರ್ವ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ, ತಾಲೂಕು ಕಸಾಪ ನಿಕಟಪೂರ್ವ ಅಧ್ಯಕ್ಷ ಡಾ. ಸೊನಲೆ ಶ್ರೀನಿವಾಸ್ ಅವರ ಪ್ರಥಮ ಪುತ್ರಿ ಯೋಷಿತಾ ಎಸ್ ಸೊನಲೆ ಅವರು ಪ್ರಸಕ್ತ ಸಾಲಿನ ಕುವೆಂಪು ವಿಶ್ವ ವಿದ್ಯಾಲಯದ ಆಂಗ್ಲ ಭಾಷಾ ಎಂ.ಎ ಪದವಿಯಲ್ಲಿ ಪ್ರಥಮ ರ್ಯಾಂಕ್ ಪಡೆದು, ಮೂರು ಚಿನ್ನದ ಪದಕಕ್ಕೆ ಭಾಜನರಾಗಿದ್ದರು.
ಇಂದು ಕುವೆಂಪು ವಿವಿಯ 34ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಚಿನ್ನದ ಪದಕದ ಜೊತೆಯಲ್ಲಿ ಪದವಿ ಪ್ರದಾನ ಮಾಡಿದರು.

ಮೂಲತಃ ಸೊನಲೆ ಗ್ರಾಮದ ಯೋಷಿತ, ತಂದೆ ಡಾ.ಸೊನಲೆ ಶ್ರೀನಿವಾಸ್ ಹಾಗು ತಾಯಿ ವೇದಾ ದಂಪತಿಗಳ ಮೊದಲ ಪುತ್ರಿ. ಪ್ರಾಥಮಿಕ, ಪ್ರೌಢ ಶಿಕ್ಷಣವನ್ನು ಕುವೆಂಪು ವಿದ್ಯಾಸಂಸ್ಥೆಯಲ್ಲಿ ಪೂರೈಸಿದ ಬಳಿಕ, ಪದವಿಯನ್ನು ಶಿವಮೊಗ್ಗದ ಕಮಲಾ ನೆಹರು ಕಾಲೇಜಿನಲ್ಲಿ ಪ್ರಥಮ ರ್ಯಾಂಕ್ ನೊಂದಿಗೆ ಪೂರ್ಣಗೊಳಿಸಿದ್ದು ವಿಶೇಷ.
ಪ್ರಸಕ್ತ ಶಿವಮೊಗ್ಗದ ಶ್ರೀ ಅಶೋಕ್ ಪೈ ಪದವಿ ಕಾಲೇಜಿನಲ್ಲಿ ಆಂಗ್ಲ ಭಾಷಾ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಇವರ ಸಾಧನೆಗೆ ಪ್ರಶಂಸೆಯ ಮಹಾಪೂರವೇ ಹರಿದುಬಂದಿದೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.