ಸಾಲಬಾಧೆ ; ನದಿಗೆ ಹಾರಿ ಯುವ ರೈತ ಆತ್ಮಹತ್ಯೆ !

Written by Mahesha Hindlemane

Published on:

ತೀರ್ಥಹಳ್ಳಿ ; ಸಾಲಬಾಧೆಯಿಂದ ಮನನೊಂದು ಯುವ ರೈತನೋರ್ವ ವಾರಾಹಿ ಹಿನ್ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊಸಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೈಮರ ಬಳಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಕೈಮರ ಸಮೀಪದ ಹಾಗಲಮನೆ ವಾಸಿ ಕೌಶಿಕ್ (30) ಆತ್ಮಹತ್ಯಗೆ ಶರಣಾದ ದುರ್ದೈವಿ. ಅವಿವಾಹಿತನಾಗಿದ್ದ ಕೌಶಿಕ್ ತಾಯಿಯೊಂದಿಗೆ ಜೀವನ ನಡೆಸುತ್ತಿದ್ದ. ಮಾಗರವಲ್ಲಿ ಸೊಸೈಟಿ, ಮೈಕ್ರೋ ಫೈನಾನ್ಸ್ ಸೇರಿದಂತೆ ಹಲವು ಕಡೆ ಬಡ್ಡಿಗೆ ಸಾಲ ಪಡೆದಿದ್ದ ಈ ಯುವಕ ಸಾಲದ ಕಿರುಕುಳಕ್ಕೆ ಬೇಸತ್ತು ಹಾಗೂ ಈ ಬಾರಿ ಅಡಿಕೆಗೆ ಬಂದಿರುವ ಎಲೆಚುಕ್ಕಿ ರೋಗದಿಂದ ಕಂಗೆಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ.

Leave a Comment