ತೀರ್ಥಹಳ್ಳಿ ; ಸಾಲಬಾಧೆಯಿಂದ ಮನನೊಂದು ಯುವ ರೈತನೋರ್ವ ವಾರಾಹಿ ಹಿನ್ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊಸಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೈಮರ ಬಳಿ ನಡೆದಿದೆ.
ಕೈಮರ ಸಮೀಪದ ಹಾಗಲಮನೆ ವಾಸಿ ಕೌಶಿಕ್ (30) ಆತ್ಮಹತ್ಯಗೆ ಶರಣಾದ ದುರ್ದೈವಿ. ಅವಿವಾಹಿತನಾಗಿದ್ದ ಕೌಶಿಕ್ ತಾಯಿಯೊಂದಿಗೆ ಜೀವನ ನಡೆಸುತ್ತಿದ್ದ. ಮಾಗರವಲ್ಲಿ ಸೊಸೈಟಿ, ಮೈಕ್ರೋ ಫೈನಾನ್ಸ್ ಸೇರಿದಂತೆ ಹಲವು ಕಡೆ ಬಡ್ಡಿಗೆ ಸಾಲ ಪಡೆದಿದ್ದ ಈ ಯುವಕ ಸಾಲದ ಕಿರುಕುಳಕ್ಕೆ ಬೇಸತ್ತು ಹಾಗೂ ಈ ಬಾರಿ ಅಡಿಕೆಗೆ ಬಂದಿರುವ ಎಲೆಚುಕ್ಕಿ ರೋಗದಿಂದ ಕಂಗೆಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.